ಕೊಡಗು : ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಇದ್ದರೂ ಸಹ ಕೊಡಗಿನ ಖಾಸಗಿ ಸಮಾರಂಭಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ನೀಡಲಾಗಿದೆ. ಮದುವೆ ಸಮಾರಂಭಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ನೀಡುವಂತೆ ಅಬಕಾರಿ ಇಲಾಖೆಗೆ ರಾಜ್ಯ ಜಂಟಿ ಚುನಾವಣಾಧಿಕಾರಿ ಸೂಚನೆ ನೀಡಿದ್ದಾರೆ. ಇದರಿಂದ ಕೊಡವರಿಗೆ ಸಂತೋಷನ್ನುಂಟು ಮಾಡಿದೆ.
ಕೊಡವರ ಮದುವೆಗಳಲ್ಲಿ ಮುಕ್ತವಾದ ಬಾರನ್ನೇ ತೆರೆದಿರಲಾಗುತ್ತದೆ. ಮದುವೆ ಸಮಾರಂಭದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಮದ್ಯ ಸೇವಿಸಿ ಡಾನ್ಸ್ ಮಾಡಿ ಎಂಜಾಯ್ ಮಾಡುತ್ತಾರೆ. ಆದರೆ, ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇದಕ್ಕೆಲ್ಲ ಬ್ರೇಕ್ ಹಾಕಿತ್ತು. ಮದುವೆ, ಸಮಾರಂಭಗಳಲ್ಲಿ ಮದ್ಯದ ವ್ಯವಸ್ಥೆ ಮಾಡಬಾರದು ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಮದುವೆ ಇಟ್ಟುಕೊಂಡವರು ಕಂಗಾಲಾಗಿದ್ದರು.
ಈ ಹಿನ್ನೆಲೆಯಲ್ಲಿ ತಮ್ಮ ಸಂಪ್ರದಾಯಕ್ಕೆ ಅಡ್ಡಿ ಮಾಡಬಾರದು ಎಂದು ಕೊಡವ ಸಮಾಜ , ಗೌಡ ಸಮಾಜ ಮನವಿ ಮಾಡಿದ್ದವು. ಮದುವೆಗಳಲ್ಲಿ ಮದ್ಯ ಪೂರೈಕೆ ನಿರ್ಬಂಧ ಆದೇಶ ಹಿಂಪಡೆಯುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಇದರಿಂದ ಇದೀಗ ನಿರ್ಬಂಧ ಸಡಿಲಿಸಿ ಆದೇಶ ಹೊರಡಿಸಲಾಗಿದೆ.
ಕೊಡಗು ಅಂದ್ರೆ ಅಲ್ಲಿ ಒಂದಲ್ಲೊಂದು ವಿಶೇಷ. ವೈಶಿಷ್ಟ್ಯ ಕಾಣಸಿಗುತ್ತದೆ. ಇಲ್ಲಿಯ ಆಚಾರ-ವಿಚಾರಗಳು ಕೂಡ ವಿಭಿನ್ನ. ಸದ್ಯ ವಿವಾಹವಾಗಲು ಚೈತ್ರ ಕಾಲವಾಗಿರುವುದರಿಂದ ಜಿಲ್ಲೆಯಲ್ಲಿ ಮದುವೆಯ ಭರಾಟೆ ಜೋರಾಗಿದೆ. ಇದೀಗ ಮದುವೆಗಳಲ್ಲಿ ಮದ್ಯ ಪಾರ್ಟಿಗೂ ಅವಕಾಶ ಸಿಕ್ಕಿದ್ದು, ಕೊಡವರ ಖುಷಿ ಮತ್ತಷ್ಟು ಹೆಚ್ಚಿಸಿದೆ.
ಕೊಡಗಿನಲ್ಲಿ ಮದುವೆ ಸೇರಿದಂತೆ ಯಾವುದೇ ಸಮಾರಂಭಗಳಲ್ಲಿ ಮುಕ್ತ ಬಾರ್ ಗಳನ್ನು ತೆರೆಯುವುದಕ್ಕೆ ಅವಕಾಶ ಇಲ್ಲ. ಮುಕ್ತ ಬಾರ್ ತೆರೆಯಲು ಅವಕಾಶ ನೀಡಿದರೆ ಅದನ್ನು ದುರುಪಯೋಗ ಪಡಿಸಿಕೊಂಡು ಮತದಾರರಿಗೆ ಮದ್ಯ ಹಂಚಿಕೆ ಮಾಡುವ ಸಾಧ್ಯತೆ ಇರಬಹುದು ಎಂದು ಚುನಾವಣಾ ಆಯೋಗ ಅದಕ್ಕೆ ಕಡಿವಾಣ ಹಾಕಿತ್ತು.
ಬೆಂಗಳೂರು: ಕೆಜಿಎಫ್-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್ ಸ್ಟಾರ್ ಯಶ್ ಅಭಿನಯದ…
ತುಮಕೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…
ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…
ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.…
ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…