ಕೊಡಗು

ಮದುವೆ ಸಮಾರಂಭದಲ್ಲಿ ಎಣ್ಣೆ ಪಾರ್ಟಿಗೆ ಗ್ರೀನ್ ಸಿಗ್ನಲ್

ಕೊಡಗು : ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಇದ್ದರೂ ಸಹ ಕೊಡಗಿನ ಖಾಸಗಿ ಸಮಾರಂಭಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ನೀಡಲಾಗಿದೆ. ಮದುವೆ ಸಮಾರಂಭಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ನೀಡುವಂತೆ ಅಬಕಾರಿ ಇಲಾಖೆಗೆ ರಾಜ್ಯ ಜಂಟಿ ಚುನಾವಣಾಧಿಕಾರಿ ಸೂಚನೆ ನೀಡಿದ್ದಾರೆ. ಇದರಿಂದ ಕೊಡವರಿಗೆ ಸಂತೋಷನ್ನುಂಟು ಮಾಡಿದೆ.

ಕೊಡವರ ಮದುವೆಗಳಲ್ಲಿ ಮುಕ್ತವಾದ ಬಾರನ್ನೇ ತೆರೆದಿರಲಾಗುತ್ತದೆ. ಮದುವೆ ಸಮಾರಂಭದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಮದ್ಯ ಸೇವಿಸಿ ಡಾನ್ಸ್​ ಮಾಡಿ ಎಂಜಾಯ್ ಮಾಡುತ್ತಾರೆ. ಆದರೆ, ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇದಕ್ಕೆಲ್ಲ ಬ್ರೇಕ್ ಹಾಕಿತ್ತು. ಮದುವೆ, ಸಮಾರಂಭಗಳಲ್ಲಿ ಮದ್ಯದ ವ್ಯವಸ್ಥೆ ಮಾಡಬಾರದು ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಮದುವೆ ಇಟ್ಟುಕೊಂಡವರು ಕಂಗಾಲಾಗಿದ್ದರು.

ಈ ಹಿನ್ನೆಲೆಯಲ್ಲಿ ತಮ್ಮ ಸಂಪ್ರದಾಯಕ್ಕೆ ಅಡ್ಡಿ ಮಾಡಬಾರದು ಎಂದು ಕೊಡವ ಸಮಾಜ , ಗೌಡ ಸಮಾಜ ಮನವಿ ಮಾಡಿದ್ದವು. ಮದುವೆಗಳಲ್ಲಿ ಮದ್ಯ ಪೂರೈಕೆ ನಿರ್ಬಂಧ ಆದೇಶ ಹಿಂಪಡೆಯುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಇದರಿಂದ ಇದೀಗ ನಿರ್ಬಂಧ ಸಡಿಲಿಸಿ ಆದೇಶ ಹೊರಡಿಸಲಾಗಿದೆ.

ಕೊಡಗು ಅಂದ್ರೆ ಅಲ್ಲಿ ಒಂದಲ್ಲೊಂದು ವಿಶೇಷ. ವೈಶಿಷ್ಟ್ಯ ಕಾಣಸಿಗುತ್ತದೆ. ಇಲ್ಲಿಯ ಆಚಾರ-ವಿಚಾರಗಳು ಕೂಡ ವಿಭಿನ್ನ. ಸದ್ಯ ವಿವಾಹವಾಗಲು ಚೈತ್ರ ಕಾಲವಾಗಿರುವುದರಿಂದ ಜಿಲ್ಲೆಯಲ್ಲಿ ಮದುವೆಯ ಭರಾಟೆ ಜೋರಾಗಿದೆ. ಇದೀಗ ಮದುವೆಗಳಲ್ಲಿ ಮದ್ಯ ಪಾರ್ಟಿಗೂ ಅವಕಾಶ ಸಿಕ್ಕಿದ್ದು, ಕೊಡವರ ಖುಷಿ ಮತ್ತಷ್ಟು ಹೆಚ್ಚಿಸಿದೆ.

ಕೊಡಗಿನಲ್ಲಿ ಮದುವೆ ಸೇರಿದಂತೆ ಯಾವುದೇ ಸಮಾರಂಭಗಳಲ್ಲಿ ಮುಕ್ತ ಬಾರ್‌ ಗಳನ್ನು ತೆರೆಯುವುದಕ್ಕೆ ಅವಕಾಶ ಇಲ್ಲ. ಮುಕ್ತ ಬಾರ್ ತೆರೆಯಲು ಅವಕಾಶ ನೀಡಿದರೆ ಅದನ್ನು ದುರುಪಯೋಗ ಪಡಿಸಿಕೊಂಡು ಮತದಾರರಿಗೆ ಮದ್ಯ ಹಂಚಿಕೆ ಮಾಡುವ ಸಾಧ್ಯತೆ ಇರಬಹುದು ಎಂದು ಚುನಾವಣಾ ಆಯೋಗ ಅದಕ್ಕೆ ಕಡಿವಾಣ ಹಾಕಿತ್ತು.

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

18 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

18 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

18 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

18 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

18 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago