ಕೊಡಗು

ಮದುವೆ ಸಮಾರಂಭದಲ್ಲಿ ಎಣ್ಣೆ ಪಾರ್ಟಿಗೆ ಗ್ರೀನ್ ಸಿಗ್ನಲ್

ಕೊಡಗು : ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಇದ್ದರೂ ಸಹ ಕೊಡಗಿನ ಖಾಸಗಿ ಸಮಾರಂಭಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ನೀಡಲಾಗಿದೆ. ಮದುವೆ ಸಮಾರಂಭಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ನೀಡುವಂತೆ ಅಬಕಾರಿ ಇಲಾಖೆಗೆ ರಾಜ್ಯ ಜಂಟಿ ಚುನಾವಣಾಧಿಕಾರಿ ಸೂಚನೆ ನೀಡಿದ್ದಾರೆ. ಇದರಿಂದ ಕೊಡವರಿಗೆ ಸಂತೋಷನ್ನುಂಟು ಮಾಡಿದೆ.

ಕೊಡವರ ಮದುವೆಗಳಲ್ಲಿ ಮುಕ್ತವಾದ ಬಾರನ್ನೇ ತೆರೆದಿರಲಾಗುತ್ತದೆ. ಮದುವೆ ಸಮಾರಂಭದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಮದ್ಯ ಸೇವಿಸಿ ಡಾನ್ಸ್​ ಮಾಡಿ ಎಂಜಾಯ್ ಮಾಡುತ್ತಾರೆ. ಆದರೆ, ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇದಕ್ಕೆಲ್ಲ ಬ್ರೇಕ್ ಹಾಕಿತ್ತು. ಮದುವೆ, ಸಮಾರಂಭಗಳಲ್ಲಿ ಮದ್ಯದ ವ್ಯವಸ್ಥೆ ಮಾಡಬಾರದು ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಮದುವೆ ಇಟ್ಟುಕೊಂಡವರು ಕಂಗಾಲಾಗಿದ್ದರು.

ಈ ಹಿನ್ನೆಲೆಯಲ್ಲಿ ತಮ್ಮ ಸಂಪ್ರದಾಯಕ್ಕೆ ಅಡ್ಡಿ ಮಾಡಬಾರದು ಎಂದು ಕೊಡವ ಸಮಾಜ , ಗೌಡ ಸಮಾಜ ಮನವಿ ಮಾಡಿದ್ದವು. ಮದುವೆಗಳಲ್ಲಿ ಮದ್ಯ ಪೂರೈಕೆ ನಿರ್ಬಂಧ ಆದೇಶ ಹಿಂಪಡೆಯುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಇದರಿಂದ ಇದೀಗ ನಿರ್ಬಂಧ ಸಡಿಲಿಸಿ ಆದೇಶ ಹೊರಡಿಸಲಾಗಿದೆ.

ಕೊಡಗು ಅಂದ್ರೆ ಅಲ್ಲಿ ಒಂದಲ್ಲೊಂದು ವಿಶೇಷ. ವೈಶಿಷ್ಟ್ಯ ಕಾಣಸಿಗುತ್ತದೆ. ಇಲ್ಲಿಯ ಆಚಾರ-ವಿಚಾರಗಳು ಕೂಡ ವಿಭಿನ್ನ. ಸದ್ಯ ವಿವಾಹವಾಗಲು ಚೈತ್ರ ಕಾಲವಾಗಿರುವುದರಿಂದ ಜಿಲ್ಲೆಯಲ್ಲಿ ಮದುವೆಯ ಭರಾಟೆ ಜೋರಾಗಿದೆ. ಇದೀಗ ಮದುವೆಗಳಲ್ಲಿ ಮದ್ಯ ಪಾರ್ಟಿಗೂ ಅವಕಾಶ ಸಿಕ್ಕಿದ್ದು, ಕೊಡವರ ಖುಷಿ ಮತ್ತಷ್ಟು ಹೆಚ್ಚಿಸಿದೆ.

ಕೊಡಗಿನಲ್ಲಿ ಮದುವೆ ಸೇರಿದಂತೆ ಯಾವುದೇ ಸಮಾರಂಭಗಳಲ್ಲಿ ಮುಕ್ತ ಬಾರ್‌ ಗಳನ್ನು ತೆರೆಯುವುದಕ್ಕೆ ಅವಕಾಶ ಇಲ್ಲ. ಮುಕ್ತ ಬಾರ್ ತೆರೆಯಲು ಅವಕಾಶ ನೀಡಿದರೆ ಅದನ್ನು ದುರುಪಯೋಗ ಪಡಿಸಿಕೊಂಡು ಮತದಾರರಿಗೆ ಮದ್ಯ ಹಂಚಿಕೆ ಮಾಡುವ ಸಾಧ್ಯತೆ ಇರಬಹುದು ಎಂದು ಚುನಾವಣಾ ಆಯೋಗ ಅದಕ್ಕೆ ಕಡಿವಾಣ ಹಾಕಿತ್ತು.

lokesh

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

1 hour ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

10 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

10 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

10 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

10 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

10 hours ago