ಕೊಡಗು

ಮದುವೆ ಸಮಾರಂಭದಲ್ಲಿ ಎಣ್ಣೆ ಪಾರ್ಟಿಗೆ ಗ್ರೀನ್ ಸಿಗ್ನಲ್

ಕೊಡಗು : ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಇದ್ದರೂ ಸಹ ಕೊಡಗಿನ ಖಾಸಗಿ ಸಮಾರಂಭಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ನೀಡಲಾಗಿದೆ. ಮದುವೆ ಸಮಾರಂಭಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ನೀಡುವಂತೆ ಅಬಕಾರಿ ಇಲಾಖೆಗೆ ರಾಜ್ಯ ಜಂಟಿ ಚುನಾವಣಾಧಿಕಾರಿ ಸೂಚನೆ ನೀಡಿದ್ದಾರೆ. ಇದರಿಂದ ಕೊಡವರಿಗೆ ಸಂತೋಷನ್ನುಂಟು ಮಾಡಿದೆ.

ಕೊಡವರ ಮದುವೆಗಳಲ್ಲಿ ಮುಕ್ತವಾದ ಬಾರನ್ನೇ ತೆರೆದಿರಲಾಗುತ್ತದೆ. ಮದುವೆ ಸಮಾರಂಭದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಮದ್ಯ ಸೇವಿಸಿ ಡಾನ್ಸ್​ ಮಾಡಿ ಎಂಜಾಯ್ ಮಾಡುತ್ತಾರೆ. ಆದರೆ, ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇದಕ್ಕೆಲ್ಲ ಬ್ರೇಕ್ ಹಾಕಿತ್ತು. ಮದುವೆ, ಸಮಾರಂಭಗಳಲ್ಲಿ ಮದ್ಯದ ವ್ಯವಸ್ಥೆ ಮಾಡಬಾರದು ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಮದುವೆ ಇಟ್ಟುಕೊಂಡವರು ಕಂಗಾಲಾಗಿದ್ದರು.

ಈ ಹಿನ್ನೆಲೆಯಲ್ಲಿ ತಮ್ಮ ಸಂಪ್ರದಾಯಕ್ಕೆ ಅಡ್ಡಿ ಮಾಡಬಾರದು ಎಂದು ಕೊಡವ ಸಮಾಜ , ಗೌಡ ಸಮಾಜ ಮನವಿ ಮಾಡಿದ್ದವು. ಮದುವೆಗಳಲ್ಲಿ ಮದ್ಯ ಪೂರೈಕೆ ನಿರ್ಬಂಧ ಆದೇಶ ಹಿಂಪಡೆಯುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಇದರಿಂದ ಇದೀಗ ನಿರ್ಬಂಧ ಸಡಿಲಿಸಿ ಆದೇಶ ಹೊರಡಿಸಲಾಗಿದೆ.

ಕೊಡಗು ಅಂದ್ರೆ ಅಲ್ಲಿ ಒಂದಲ್ಲೊಂದು ವಿಶೇಷ. ವೈಶಿಷ್ಟ್ಯ ಕಾಣಸಿಗುತ್ತದೆ. ಇಲ್ಲಿಯ ಆಚಾರ-ವಿಚಾರಗಳು ಕೂಡ ವಿಭಿನ್ನ. ಸದ್ಯ ವಿವಾಹವಾಗಲು ಚೈತ್ರ ಕಾಲವಾಗಿರುವುದರಿಂದ ಜಿಲ್ಲೆಯಲ್ಲಿ ಮದುವೆಯ ಭರಾಟೆ ಜೋರಾಗಿದೆ. ಇದೀಗ ಮದುವೆಗಳಲ್ಲಿ ಮದ್ಯ ಪಾರ್ಟಿಗೂ ಅವಕಾಶ ಸಿಕ್ಕಿದ್ದು, ಕೊಡವರ ಖುಷಿ ಮತ್ತಷ್ಟು ಹೆಚ್ಚಿಸಿದೆ.

ಕೊಡಗಿನಲ್ಲಿ ಮದುವೆ ಸೇರಿದಂತೆ ಯಾವುದೇ ಸಮಾರಂಭಗಳಲ್ಲಿ ಮುಕ್ತ ಬಾರ್‌ ಗಳನ್ನು ತೆರೆಯುವುದಕ್ಕೆ ಅವಕಾಶ ಇಲ್ಲ. ಮುಕ್ತ ಬಾರ್ ತೆರೆಯಲು ಅವಕಾಶ ನೀಡಿದರೆ ಅದನ್ನು ದುರುಪಯೋಗ ಪಡಿಸಿಕೊಂಡು ಮತದಾರರಿಗೆ ಮದ್ಯ ಹಂಚಿಕೆ ಮಾಡುವ ಸಾಧ್ಯತೆ ಇರಬಹುದು ಎಂದು ಚುನಾವಣಾ ಆಯೋಗ ಅದಕ್ಕೆ ಕಡಿವಾಣ ಹಾಕಿತ್ತು.

lokesh

Recent Posts

ಪಾಳು ಬಿದ್ದಿರುವ ವೈದ್ಯರು, ದಾದಿಯರ ವಸತಿಗೃಹಗಳು

ಭೇರ್ಯ ಮಹೇಶ್ ಭೇರ್ಯ: ಶಿಥಿಲಗೊಂಡಿರುವ ಕಾರಣದಿಂದ ವಾಸಿಸಲು ಹಿಂಜರಿಯುವ ವೈದ್ಯರು, ದಾದಿಯರು, ಸಹಾಯಕಿಯರು ಭೇರ್ಯ: ಭೇರ್ಯ ಗ್ರಾಮದ ಪ್ರಾಥಮಿಕ ಆರೋಗ್ಯ…

25 seconds ago

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

8 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

9 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

10 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

11 hours ago