ಸಚಿವ ಸಂಪುಟ ಪುನರ್ರಚನೆ ಊಹಾಪೋಹ
ಮಡಿಕೇರಿ: ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿಯಾಗಿವೆ, ಇವುಗಳಲ್ಲಿ ಯಾವುದೇ ಬದಲಾವಣೆಯ ಅವಶ್ಯಕತೆಯಿಲ್ಲ ಹಾಗೂ ಆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತವಾರಿ ಸಚಿವರಾದ ಎನ್ ಎಸ್ ಭೋಸರಾಜು ಪ್ರತಿಕ್ರಿಯಿಸಿದರು.
ಇಂದು ವಿರಾಜಪೇಟೆ ತಾಲ್ಲೂಕಿನ ಬೊಳ್ಳಮಾಡು ಗ್ರಾಮದಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ “ಬೇಲ್ ನಮ್ಮೆ” ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ ಯೋಜನೆಗಳಾಗಿವೆ. ನಮ್ಮ ಗ್ಯಾರಂಟಿ ಯೋಜನೆಗಳ ಅನ್ವಯ ಹಲವಾರು ರಾಜ್ಯಗಳು ಇದೇ ರೀತಿಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಿವೆ. ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳಿಂದ ಆಗಿರುವ ಪರಿಣಾಮಗಳ ಬಗ್ಗೆ ಚರ್ಚೆ ಆಗಿದೆಯೇ ಹೊರತು, ಅವುಗಳನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಯಾವುದೇ ಚರ್ಚೆಗಳು ಆಗಿಲ್ಲ. ಈ ಯೋಜನೆಗಳೂ ಯಥಾಸ್ಥಿತಿಯಲ್ಲಿಯೇ ಮುಂದುವರೆಯಲಿವೆ ಎಂದು ಸ್ಪಷ್ಟಪಡಿಸಿದರು.
ಏಐಸಿಸಿ ವತಿಯಿಂದ ಆಯೋಜಿಸಲಾಗಿರುವ ಎಲ್ಲಾ ರಾಜ್ಯದ ರಾಜ್ಯಾಧ್ಯಕ್ಷರುಗಳ ಸಭೆಯಲ್ಲಿ ಪಾಲ್ಗೊಳ್ಳಲು ನಮ್ಮ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ. ಸಚಿವ ಸಂಪುಟ ಪುನರ್ರಚನೆಯ ಬಗ್ಗೆ ಚರ್ಚೆ ಮಾಡಲು ಅಲ್ಲ. ಸಚಿವ ಸಂಪುಟ ಪುನರ್ರಚನೆ ಕೇವಲ ಉಹಾಪೋಹ ಎಂದು ಹೇಳಿದರು.
ಮಂಡ್ಯ: ಸಚಿವ ಎಚ್.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ…
ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು…
ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…