ಸಚಿವ ಸಂಪುಟ ಪುನರ್ರಚನೆ ಊಹಾಪೋಹ
ಮಡಿಕೇರಿ: ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿಯಾಗಿವೆ, ಇವುಗಳಲ್ಲಿ ಯಾವುದೇ ಬದಲಾವಣೆಯ ಅವಶ್ಯಕತೆಯಿಲ್ಲ ಹಾಗೂ ಆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತವಾರಿ ಸಚಿವರಾದ ಎನ್ ಎಸ್ ಭೋಸರಾಜು ಪ್ರತಿಕ್ರಿಯಿಸಿದರು.
ಇಂದು ವಿರಾಜಪೇಟೆ ತಾಲ್ಲೂಕಿನ ಬೊಳ್ಳಮಾಡು ಗ್ರಾಮದಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ “ಬೇಲ್ ನಮ್ಮೆ” ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ ಯೋಜನೆಗಳಾಗಿವೆ. ನಮ್ಮ ಗ್ಯಾರಂಟಿ ಯೋಜನೆಗಳ ಅನ್ವಯ ಹಲವಾರು ರಾಜ್ಯಗಳು ಇದೇ ರೀತಿಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಿವೆ. ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳಿಂದ ಆಗಿರುವ ಪರಿಣಾಮಗಳ ಬಗ್ಗೆ ಚರ್ಚೆ ಆಗಿದೆಯೇ ಹೊರತು, ಅವುಗಳನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಯಾವುದೇ ಚರ್ಚೆಗಳು ಆಗಿಲ್ಲ. ಈ ಯೋಜನೆಗಳೂ ಯಥಾಸ್ಥಿತಿಯಲ್ಲಿಯೇ ಮುಂದುವರೆಯಲಿವೆ ಎಂದು ಸ್ಪಷ್ಟಪಡಿಸಿದರು.
ಏಐಸಿಸಿ ವತಿಯಿಂದ ಆಯೋಜಿಸಲಾಗಿರುವ ಎಲ್ಲಾ ರಾಜ್ಯದ ರಾಜ್ಯಾಧ್ಯಕ್ಷರುಗಳ ಸಭೆಯಲ್ಲಿ ಪಾಲ್ಗೊಳ್ಳಲು ನಮ್ಮ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ. ಸಚಿವ ಸಂಪುಟ ಪುನರ್ರಚನೆಯ ಬಗ್ಗೆ ಚರ್ಚೆ ಮಾಡಲು ಅಲ್ಲ. ಸಚಿವ ಸಂಪುಟ ಪುನರ್ರಚನೆ ಕೇವಲ ಉಹಾಪೋಹ ಎಂದು ಹೇಳಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…