ಮಡಿಕೇರಿ: 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕೊಡಗು ಜಿಲ್ಲಾ ಪಂಚಾಯತ್, ತಾಲೂಕ್ ಪಂಚಾಯತ್, ಶಿಕ್ಷಣ ಇಲಾಖೆ, ಗ್ರಾಮ ಪಂಚಾಯಿತಿ, ಪೊನ್ನಂಪೇಟೆ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಇಂದು
ಪೊನ್ನಂಪೇಟೆಯಲ್ಲಿ ಹರ್ ಘರ್ ತಿರಂಗ ಅಭಿಯಾನ ಮೂಲಕ ಮನೆಮನೆಗೆ ತ್ರಿವರ್ಣ ಧ್ವಜ ಮೆರವಣಿಗೆ ನಡೆಸಲಾಯಿತು.
ನಂತರ ವಿದ್ಯಾರ್ಥಿಗಳು ಇಲ್ಲಿನ ಬಸ್ ನಿಲ್ದಾಣದಲ್ಲಿ ಭಾರತದ ಭೂಪಟವನ್ನು ಹೋಲುವಂತೆ ರಚಿಸಿ ಭಾರತದ ಏಕತೆ ಬಗ್ಗೆ ಸಂದೇಶ ಸಾರಿದರು. ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಣಾಧಿಕಾರಿ ಅಪ್ಪಣ್ಣ ಸಾರ್ವಜನಿಕರಿಗೆ ತಿಳಿಸಿದರು. ಇಲ್ಲಿನ ಕೆ.ಪಿ.ಎಸ್ ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ರಾಷ್ಟ್ರಧ್ವಜ ಸ್ವೀಕರಿಸಿದ ಶಾಸಕ
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ “ಹರ್ ಘರ್ ತಿರಂಗಾ” ಅಭಿಯಾನದ ಅಂಗವಾಗಿ ಕೇಂದ್ರ ಸರ್ಕಾರದ ಸಚಿವಾಲಯದಿಂದ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಕಳುಹಿಸಿಕೊಡಲಾದ ರಾಷ್ಟ್ರಧ್ವಜವನ್ನು ಶಾಸಕರಾದ ಎ. ಎಸ್ ಪೊನ್ನಣ್ಣನವರು ಸ್ವೀಕರಿಸಿದರು. ಈ ಸಂದರ್ಭ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…