ಕೊಡಗು

ಕೊಡಗಿನಲ್ಲಿ ರಾತ್ರಿ ಸುರಿದ ಮಳೆಗೆ ಭಾರೀ ಅವಾಂತರ

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ತಡರಾತ್ರಿ ಸುರಿದ ಭಾರೀ ಮಳೆಗೆ ಭಾರೀ ಅವಾಂತರವೇ ಸೃಷ್ಟಿಯಾಗಿದೆ.

ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕೊಡಗಿನ ಹಲವೆಡೆ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ.‌

ಭಾರೀ ಮಳೆಯಿಂದ ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಹರಿದಿದ್ದು, ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ.

ಕೊಡ್ಲಿಪೇಟೆ – ಶನಿವಾರಸಂತೆ ಮಾರ್ಗದಲ್ಲಿ ಬೃಹತ್ ಗಾತ್ರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಇದನ್ನೂ ಓದಿ:- ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಲಾರಿ

ದುಬಾರೆ ಸಮೀಪದ ಬಾಳುಗೋಡುವಿನಲ್ಲಿ ರಸ್ತೆಗೆ ಅಡ್ಡಲಾಗಿ ಮರವೊಂದು ಬಿದ್ದಿದ್ದು, ಅಲ್ಲೂ ಕೂಡ ವಾಹನ ಸಂಚಾರಕ್ಕೆ ಅಡಚಣೆ ಆಗಿದೆ‌.

ಇನ್ನೂ ಹಲವೆಡೆಗಳಲ್ಲಿ ಭಾರೀ ಮಳೆಯಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನತೆ ಕತ್ತಲಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಆಂದೋಲನ ಡೆಸ್ಕ್

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

3 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

17 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

17 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

17 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

17 hours ago