Heavy rain continues in Kodagu
ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಭಾರೀ ಮಳೆಯಿಂದ ಹಲವೆಡೆ ಬೃಹದಾಕಾರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಾದಾಪುರ ಸಮೀಪದಲ್ಲಿ ಮರ, ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ರಸ್ತೆ ಸಂಚಾರ ಬಂದ್ ಆಗಿದೆ.
ಇನ್ನು ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಜೀವನದಿ ಕಾವೇರಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಇನ್ನು ಅಮ್ಮತ್ತಿ ಹೋಬಳಿ ಪುಲಿಗೇರಿ ಗ್ರಾಮದ ಶೀಜಾ ರಜೀಶ್ ಎಂಬುವವರ ಮನೆ ಮೇಲೆ ವಿದ್ಯುತ್ ಕಂಬ ಬಿದ್ದು, ಮನೆ ಭಾಗಶಃ ಹಾನಿಯಾಗಿದೆ. ಜೊತೆಗೆ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೂ ವಿದ್ಯುತ್ ಕಂಬ ಬಿದ್ದಿದ್ದು, ಕಾರು ಜಖಂಗೊಂಡಿದೆ.
ಇನ್ನು ಭಾರೀ ಮಳೆಯಿಂದ ಸೋಮವಾರಪೇಟೆ ಯಡೂರು ಗ್ರಾಮದ ಹೊನ್ನಪ್ಪ ಎಂಬುವವರ ಮನೆ ಮುಂಭಾಗದಲ್ಲಿ ಬರೆ ಕುಸಿದಿದ್ದು, ಆತಂಕ ಸೃಷ್ಟಿಯಾಗಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…