Heavy Rain: Family Uses Coracle to Take Bride Home!
ನಾಪೋಕ್ಲು : ಬಿರುಸಿನ ಮಳೆಯ ನಡುವೆ ಇತ್ತೀಚೆಗೆ ವಿವಾಹವಾಗಿದ್ದ ವಧುವನ್ನು ಕುಟುಂಬಸ್ಥರು ತವರು ಮನೆಗೆ ತೆಪ್ಪದ ಮೂಲಕ ಕರೆದುಕೊಂಡು ಹೋದ ಘಟನೆ ಗುರುವಾರ ನಡೆದಿದೆ.
ಕೊಡಗಿನಾದ್ಯಂತ ಬಿರುಸಿನ ಮಳೆಯಾಗಿದ್ದು, ನಾಪೋಕ್ಲು ವ್ಯಾಪ್ತಿಯ ಹಲವೆಡೆ ರಸ್ತೆಗಳು ಜಲಾವೃತವಾಗಿ ರಸ್ತೆ ಸಂಪರ್ಕ ಕಡಿತಗೊಂಡಿವೆ. ಇಂತಹ ಬಿರುಸಿನ ಮಳೆಯ ನಡುವೆ ಇಲ್ಲಿಯ ಚೆರಿಯಪರಂಬುವಿನ ವರ ಹಾಗೂ ಮಡಿಕೇರಿಯ ವಧುವಿನ ವಿವಾಹ ಸಮಾರಂಭ ಜರುಗಿದೆ. ಕಳೆದ ವಾರ ಮಡಿಕೇರಿಯಲ್ಲಿ ಮದುವೆ ಕಾರ್ಯಕ್ರಮ ಜರುಗಿದ ಬಳಿಕ ವಧುವನ್ನು ಇಲ್ಲಿಯ ಚೆರಿಯಪರಂಬುವಿನ ವರನ ಮನೆಗೆ ಕಳುಹಿಸಿಕೊಡಲಾಗಿತ್ತು.
ಹಿಂತಿರುಗಿ ತವರು ಮನೆಗೆ ಕರೆದುಕೊಂಡು ಹೋಗುವ ಸಂಪ್ರದಾಯದಂತೆ ಗುರುವಾರ ವಧುವಿನ ಮನೆಯವರು ವಧುವನ್ನು ಕರೆದುಕೊಂಡು ಹೋಗಲು ವರನ ಮನೆಗೆ ಆಗಮಿಸುವಾಗ ಮಳೆ, ಪ್ರವಾಹದಿಂದಾಗಿ ನಾಪೋಕ್ಲು – ಚೆರಿಯಪರಂಬು ರಸ್ತೆ ಪ್ರವಾಹದಲ್ಲಿ ಮುಳುಗಿ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಪರ್ಯಾಯ ಮಾರ್ಗವಾಗಿ ತೆಪ್ಪ ತರಿಸಿ ತೆಪ್ಪದ ಮೂಲಕ ಪ್ರವಾಹದ ನೀರಿನಲ್ಲಿ ಸಾಗಿದ್ದಾರೆ. ಆ ಮೂಲಕ ಚೆರಿಯಪರಂಬುವಿನಲ್ಲಿರುವ ವರನ ಮನೆ ತಲುಪಿ ಕಾರ್ಯಕ್ರಮದ ಬಳಿಕ ವಧುವನ್ನು ತವರು ಮನೆಗೆ ಕರೆದುಕೊಂಡು ಹೋಗುವ ಸಂಪ್ರದಾಯ ಪಾಲಿಸಲು ಮಹಿಳೆಯರು, ಮಕ್ಕಳು ತೆಪ್ಪದಲ್ಲಿ ಸಾಗುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಯಿತು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…