Heavy Rain: Family Uses Coracle to Take Bride Home!
ನಾಪೋಕ್ಲು : ಬಿರುಸಿನ ಮಳೆಯ ನಡುವೆ ಇತ್ತೀಚೆಗೆ ವಿವಾಹವಾಗಿದ್ದ ವಧುವನ್ನು ಕುಟುಂಬಸ್ಥರು ತವರು ಮನೆಗೆ ತೆಪ್ಪದ ಮೂಲಕ ಕರೆದುಕೊಂಡು ಹೋದ ಘಟನೆ ಗುರುವಾರ ನಡೆದಿದೆ.
ಕೊಡಗಿನಾದ್ಯಂತ ಬಿರುಸಿನ ಮಳೆಯಾಗಿದ್ದು, ನಾಪೋಕ್ಲು ವ್ಯಾಪ್ತಿಯ ಹಲವೆಡೆ ರಸ್ತೆಗಳು ಜಲಾವೃತವಾಗಿ ರಸ್ತೆ ಸಂಪರ್ಕ ಕಡಿತಗೊಂಡಿವೆ. ಇಂತಹ ಬಿರುಸಿನ ಮಳೆಯ ನಡುವೆ ಇಲ್ಲಿಯ ಚೆರಿಯಪರಂಬುವಿನ ವರ ಹಾಗೂ ಮಡಿಕೇರಿಯ ವಧುವಿನ ವಿವಾಹ ಸಮಾರಂಭ ಜರುಗಿದೆ. ಕಳೆದ ವಾರ ಮಡಿಕೇರಿಯಲ್ಲಿ ಮದುವೆ ಕಾರ್ಯಕ್ರಮ ಜರುಗಿದ ಬಳಿಕ ವಧುವನ್ನು ಇಲ್ಲಿಯ ಚೆರಿಯಪರಂಬುವಿನ ವರನ ಮನೆಗೆ ಕಳುಹಿಸಿಕೊಡಲಾಗಿತ್ತು.
ಹಿಂತಿರುಗಿ ತವರು ಮನೆಗೆ ಕರೆದುಕೊಂಡು ಹೋಗುವ ಸಂಪ್ರದಾಯದಂತೆ ಗುರುವಾರ ವಧುವಿನ ಮನೆಯವರು ವಧುವನ್ನು ಕರೆದುಕೊಂಡು ಹೋಗಲು ವರನ ಮನೆಗೆ ಆಗಮಿಸುವಾಗ ಮಳೆ, ಪ್ರವಾಹದಿಂದಾಗಿ ನಾಪೋಕ್ಲು – ಚೆರಿಯಪರಂಬು ರಸ್ತೆ ಪ್ರವಾಹದಲ್ಲಿ ಮುಳುಗಿ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಪರ್ಯಾಯ ಮಾರ್ಗವಾಗಿ ತೆಪ್ಪ ತರಿಸಿ ತೆಪ್ಪದ ಮೂಲಕ ಪ್ರವಾಹದ ನೀರಿನಲ್ಲಿ ಸಾಗಿದ್ದಾರೆ. ಆ ಮೂಲಕ ಚೆರಿಯಪರಂಬುವಿನಲ್ಲಿರುವ ವರನ ಮನೆ ತಲುಪಿ ಕಾರ್ಯಕ್ರಮದ ಬಳಿಕ ವಧುವನ್ನು ತವರು ಮನೆಗೆ ಕರೆದುಕೊಂಡು ಹೋಗುವ ಸಂಪ್ರದಾಯ ಪಾಲಿಸಲು ಮಹಿಳೆಯರು, ಮಕ್ಕಳು ತೆಪ್ಪದಲ್ಲಿ ಸಾಗುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಯಿತು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…