ಕೊಡಗು

ಭಾರೀ ಮಳೆ : ತೆಪ್ಪದ ಸಹಾಯದಿಂದ ವಧುವನ್ನು ಕರೆದುಕೊಂಡ ಹೋದ ಕುಟುಂಬಸ್ಥರು.!

ನಾಪೋಕ್ಲು : ಬಿರುಸಿನ ಮಳೆಯ ನಡುವೆ ಇತ್ತೀಚೆಗೆ ವಿವಾಹವಾಗಿದ್ದ ವಧುವನ್ನು ಕುಟುಂಬಸ್ಥರು ತವರು ಮನೆಗೆ ತೆಪ್ಪದ ಮೂಲಕ ಕರೆದುಕೊಂಡು ಹೋದ ಘಟನೆ ಗುರುವಾರ ನಡೆದಿದೆ.
ಕೊಡಗಿನಾದ್ಯಂತ ಬಿರುಸಿನ ಮಳೆಯಾಗಿದ್ದು, ನಾಪೋಕ್ಲು ವ್ಯಾಪ್ತಿಯ ಹಲವೆಡೆ ರಸ್ತೆಗಳು ಜಲಾವೃತವಾಗಿ ರಸ್ತೆ ಸಂಪರ್ಕ ಕಡಿತಗೊಂಡಿವೆ. ಇಂತಹ ಬಿರುಸಿನ ಮಳೆಯ ನಡುವೆ ಇಲ್ಲಿಯ ಚೆರಿಯಪರಂಬುವಿನ ವರ ಹಾಗೂ ಮಡಿಕೇರಿಯ ವಧುವಿನ ವಿವಾಹ ಸಮಾರಂಭ ಜರುಗಿದೆ. ಕಳೆದ ವಾರ ಮಡಿಕೇರಿಯಲ್ಲಿ ಮದುವೆ ಕಾರ್ಯಕ್ರಮ ಜರುಗಿದ ಬಳಿಕ ವಧುವನ್ನು ಇಲ್ಲಿಯ ಚೆರಿಯಪರಂಬುವಿನ ವರನ ಮನೆಗೆ ಕಳುಹಿಸಿಕೊಡಲಾಗಿತ್ತು.
ಹಿಂತಿರುಗಿ ತವರು ಮನೆಗೆ ಕರೆದುಕೊಂಡು ಹೋಗುವ ಸಂಪ್ರದಾಯದಂತೆ ಗುರುವಾರ ವಧುವಿನ ಮನೆಯವರು ವಧುವನ್ನು ಕರೆದುಕೊಂಡು ಹೋಗಲು ವರನ ಮನೆಗೆ ಆಗಮಿಸುವಾಗ ಮಳೆ, ಪ್ರವಾಹದಿಂದಾಗಿ ನಾಪೋಕ್ಲು – ಚೆರಿಯಪರಂಬು ರಸ್ತೆ ಪ್ರವಾಹದಲ್ಲಿ ಮುಳುಗಿ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಪರ್ಯಾಯ ಮಾರ್ಗವಾಗಿ ತೆಪ್ಪ ತರಿಸಿ ತೆಪ್ಪದ ಮೂಲಕ ಪ್ರವಾಹದ ನೀರಿನಲ್ಲಿ ಸಾಗಿದ್ದಾರೆ. ಆ ಮೂಲಕ ಚೆರಿಯಪರಂಬುವಿನಲ್ಲಿರುವ ವರನ ಮನೆ ತಲುಪಿ ಕಾರ್ಯಕ್ರಮದ ಬಳಿಕ ವಧುವನ್ನು ತವರು ಮನೆಗೆ ಕರೆದುಕೊಂಡು ಹೋಗುವ ಸಂಪ್ರದಾಯ ಪಾಲಿಸಲು ಮಹಿಳೆಯರು, ಮಕ್ಕಳು ತೆಪ್ಪದಲ್ಲಿ ಸಾಗುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಯಿತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

19 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

19 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

19 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

19 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

19 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

22 hours ago