Heavy Rain: Family Uses Coracle to Take Bride Home!
ನಾಪೋಕ್ಲು : ಬಿರುಸಿನ ಮಳೆಯ ನಡುವೆ ಇತ್ತೀಚೆಗೆ ವಿವಾಹವಾಗಿದ್ದ ವಧುವನ್ನು ಕುಟುಂಬಸ್ಥರು ತವರು ಮನೆಗೆ ತೆಪ್ಪದ ಮೂಲಕ ಕರೆದುಕೊಂಡು ಹೋದ ಘಟನೆ ಗುರುವಾರ ನಡೆದಿದೆ.
ಕೊಡಗಿನಾದ್ಯಂತ ಬಿರುಸಿನ ಮಳೆಯಾಗಿದ್ದು, ನಾಪೋಕ್ಲು ವ್ಯಾಪ್ತಿಯ ಹಲವೆಡೆ ರಸ್ತೆಗಳು ಜಲಾವೃತವಾಗಿ ರಸ್ತೆ ಸಂಪರ್ಕ ಕಡಿತಗೊಂಡಿವೆ. ಇಂತಹ ಬಿರುಸಿನ ಮಳೆಯ ನಡುವೆ ಇಲ್ಲಿಯ ಚೆರಿಯಪರಂಬುವಿನ ವರ ಹಾಗೂ ಮಡಿಕೇರಿಯ ವಧುವಿನ ವಿವಾಹ ಸಮಾರಂಭ ಜರುಗಿದೆ. ಕಳೆದ ವಾರ ಮಡಿಕೇರಿಯಲ್ಲಿ ಮದುವೆ ಕಾರ್ಯಕ್ರಮ ಜರುಗಿದ ಬಳಿಕ ವಧುವನ್ನು ಇಲ್ಲಿಯ ಚೆರಿಯಪರಂಬುವಿನ ವರನ ಮನೆಗೆ ಕಳುಹಿಸಿಕೊಡಲಾಗಿತ್ತು.
ಹಿಂತಿರುಗಿ ತವರು ಮನೆಗೆ ಕರೆದುಕೊಂಡು ಹೋಗುವ ಸಂಪ್ರದಾಯದಂತೆ ಗುರುವಾರ ವಧುವಿನ ಮನೆಯವರು ವಧುವನ್ನು ಕರೆದುಕೊಂಡು ಹೋಗಲು ವರನ ಮನೆಗೆ ಆಗಮಿಸುವಾಗ ಮಳೆ, ಪ್ರವಾಹದಿಂದಾಗಿ ನಾಪೋಕ್ಲು – ಚೆರಿಯಪರಂಬು ರಸ್ತೆ ಪ್ರವಾಹದಲ್ಲಿ ಮುಳುಗಿ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಪರ್ಯಾಯ ಮಾರ್ಗವಾಗಿ ತೆಪ್ಪ ತರಿಸಿ ತೆಪ್ಪದ ಮೂಲಕ ಪ್ರವಾಹದ ನೀರಿನಲ್ಲಿ ಸಾಗಿದ್ದಾರೆ. ಆ ಮೂಲಕ ಚೆರಿಯಪರಂಬುವಿನಲ್ಲಿರುವ ವರನ ಮನೆ ತಲುಪಿ ಕಾರ್ಯಕ್ರಮದ ಬಳಿಕ ವಧುವನ್ನು ತವರು ಮನೆಗೆ ಕರೆದುಕೊಂಡು ಹೋಗುವ ಸಂಪ್ರದಾಯ ಪಾಲಿಸಲು ಮಹಿಳೆಯರು, ಮಕ್ಕಳು ತೆಪ್ಪದಲ್ಲಿ ಸಾಗುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಯಿತು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…