ಕೊಡಗು: ಕೊಡಗಿನಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಅನ್ನದಾತರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ.
ಮೇ ತಿಂಗಳಿನಲ್ಲಿ ಆರಂಭಿಕ ಮಳೆ ಉತ್ತಮವಾಗಿ ಆದ ಪರಿಣಾಮ ರೈತರು ಗದ್ದೆ ಉಳುಮೆ ಕಾರ್ಯ ಪ್ರಾರಂಭಿಸಿದ್ದಾರೆ. ತಿಂಗಳ ಮುಂಚೆಯೇ ಗದ್ದೆಗೆ ಬೀಜ ಹಾಕಿದ ರೈತರಿಗೆ ಈ ಮಳೆಯಿಂದ ತುಂಬಾ ಅನುಕೂಲವಾಗಿದೆ.
ಇನ್ನು ಸುಂಟಿಕೊಪ್ಪ ಸೇರಿದಂತೆ ಕೊಡಗಿನ ಅನೇಕ ಪ್ರದೇಶಗಳಲ್ಲಿ ಈಗ ಗದ್ದೆ ಉಳುಮೆ ಕಾರ್ಯ ನಡೆಯುತ್ತಿದ್ದು, ಇನ್ನೊಂದು ವಾರದಲ್ಲಿ ಬಿತ್ತನೆ ಕಾರ್ಯವು ಸಹ ಮುಗಿದುಹೋಗಲಿದೆ.
ಕೊಡಗಿನಲ್ಲಿ ಒಂದೆಡೆ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇದರ ನಡುವೆ ಈಗ ಗದ್ದೆ ನಾಟಿ ಕಾರ್ಯ ನಡೆಯುತ್ತಿದ್ದು, ಅನ್ನದಾತರು ಫುಲ್ ಖುಷ್ ಆಗಿದ್ದಾರೆ.
ಈ ಬಾರಿ ಕೊಡಗಿನಲ್ಲಿ ಉತ್ತಮ ಮುಂಗಾರು ಮಳೆ ಆಗಿರುವ ಪರಿಣಾಮ ಫಸಲು ಉತ್ತಮ ಇಳುವರಿ ಕೊಡಲಿದೆ ಎಂದು ರೈತರು ಅಂದಾಜು ಹಾಕಿಕೊಂಡಿದ್ದಾರೆ. ಭತ್ತದ ಜೊತೆಗೆ ಇನ್ನೂ ಅನೇಕ ಬೆಳೆಗಳನ್ನು ಬೆಳೆಯಲಿದ್ದು, ರೈತರಿಗೆ ಈ ಬಾರಿಯ ಮಳೆ ವರದಾನವಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…