ಕೊಡಗು: ಕೊಡಗಿನಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಅನ್ನದಾತರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ.
ಮೇ ತಿಂಗಳಿನಲ್ಲಿ ಆರಂಭಿಕ ಮಳೆ ಉತ್ತಮವಾಗಿ ಆದ ಪರಿಣಾಮ ರೈತರು ಗದ್ದೆ ಉಳುಮೆ ಕಾರ್ಯ ಪ್ರಾರಂಭಿಸಿದ್ದಾರೆ. ತಿಂಗಳ ಮುಂಚೆಯೇ ಗದ್ದೆಗೆ ಬೀಜ ಹಾಕಿದ ರೈತರಿಗೆ ಈ ಮಳೆಯಿಂದ ತುಂಬಾ ಅನುಕೂಲವಾಗಿದೆ.
ಇನ್ನು ಸುಂಟಿಕೊಪ್ಪ ಸೇರಿದಂತೆ ಕೊಡಗಿನ ಅನೇಕ ಪ್ರದೇಶಗಳಲ್ಲಿ ಈಗ ಗದ್ದೆ ಉಳುಮೆ ಕಾರ್ಯ ನಡೆಯುತ್ತಿದ್ದು, ಇನ್ನೊಂದು ವಾರದಲ್ಲಿ ಬಿತ್ತನೆ ಕಾರ್ಯವು ಸಹ ಮುಗಿದುಹೋಗಲಿದೆ.
ಕೊಡಗಿನಲ್ಲಿ ಒಂದೆಡೆ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇದರ ನಡುವೆ ಈಗ ಗದ್ದೆ ನಾಟಿ ಕಾರ್ಯ ನಡೆಯುತ್ತಿದ್ದು, ಅನ್ನದಾತರು ಫುಲ್ ಖುಷ್ ಆಗಿದ್ದಾರೆ.
ಈ ಬಾರಿ ಕೊಡಗಿನಲ್ಲಿ ಉತ್ತಮ ಮುಂಗಾರು ಮಳೆ ಆಗಿರುವ ಪರಿಣಾಮ ಫಸಲು ಉತ್ತಮ ಇಳುವರಿ ಕೊಡಲಿದೆ ಎಂದು ರೈತರು ಅಂದಾಜು ಹಾಕಿಕೊಂಡಿದ್ದಾರೆ. ಭತ್ತದ ಜೊತೆಗೆ ಇನ್ನೂ ಅನೇಕ ಬೆಳೆಗಳನ್ನು ಬೆಳೆಯಲಿದ್ದು, ರೈತರಿಗೆ ಈ ಬಾರಿಯ ಮಳೆ ವರದಾನವಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ.
ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…
ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್.27ರಂದು ದೆಹಲಿಯ ಇಂದಿರಾ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…
ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್…
ಸ್ಯಾಂಡಲ್ವುಡ್ನಲ್ಲಿ ಇಂದು ಕ್ರಿಸ್ಮಸ್ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್,…