ಕೊಡಗು: ಕೊಡಗಿನಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಅನ್ನದಾತರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ.
ಮೇ ತಿಂಗಳಿನಲ್ಲಿ ಆರಂಭಿಕ ಮಳೆ ಉತ್ತಮವಾಗಿ ಆದ ಪರಿಣಾಮ ರೈತರು ಗದ್ದೆ ಉಳುಮೆ ಕಾರ್ಯ ಪ್ರಾರಂಭಿಸಿದ್ದಾರೆ. ತಿಂಗಳ ಮುಂಚೆಯೇ ಗದ್ದೆಗೆ ಬೀಜ ಹಾಕಿದ ರೈತರಿಗೆ ಈ ಮಳೆಯಿಂದ ತುಂಬಾ ಅನುಕೂಲವಾಗಿದೆ.
ಇನ್ನು ಸುಂಟಿಕೊಪ್ಪ ಸೇರಿದಂತೆ ಕೊಡಗಿನ ಅನೇಕ ಪ್ರದೇಶಗಳಲ್ಲಿ ಈಗ ಗದ್ದೆ ಉಳುಮೆ ಕಾರ್ಯ ನಡೆಯುತ್ತಿದ್ದು, ಇನ್ನೊಂದು ವಾರದಲ್ಲಿ ಬಿತ್ತನೆ ಕಾರ್ಯವು ಸಹ ಮುಗಿದುಹೋಗಲಿದೆ.
ಕೊಡಗಿನಲ್ಲಿ ಒಂದೆಡೆ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇದರ ನಡುವೆ ಈಗ ಗದ್ದೆ ನಾಟಿ ಕಾರ್ಯ ನಡೆಯುತ್ತಿದ್ದು, ಅನ್ನದಾತರು ಫುಲ್ ಖುಷ್ ಆಗಿದ್ದಾರೆ.
ಈ ಬಾರಿ ಕೊಡಗಿನಲ್ಲಿ ಉತ್ತಮ ಮುಂಗಾರು ಮಳೆ ಆಗಿರುವ ಪರಿಣಾಮ ಫಸಲು ಉತ್ತಮ ಇಳುವರಿ ಕೊಡಲಿದೆ ಎಂದು ರೈತರು ಅಂದಾಜು ಹಾಕಿಕೊಂಡಿದ್ದಾರೆ. ಭತ್ತದ ಜೊತೆಗೆ ಇನ್ನೂ ಅನೇಕ ಬೆಳೆಗಳನ್ನು ಬೆಳೆಯಲಿದ್ದು, ರೈತರಿಗೆ ಈ ಬಾರಿಯ ಮಳೆ ವರದಾನವಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ.
ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್ಪಿಜಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…