ಕೊಡಗು: ಕೊಡಗಿನಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಅನ್ನದಾತರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ.
ಮೇ ತಿಂಗಳಿನಲ್ಲಿ ಆರಂಭಿಕ ಮಳೆ ಉತ್ತಮವಾಗಿ ಆದ ಪರಿಣಾಮ ರೈತರು ಗದ್ದೆ ಉಳುಮೆ ಕಾರ್ಯ ಪ್ರಾರಂಭಿಸಿದ್ದಾರೆ. ತಿಂಗಳ ಮುಂಚೆಯೇ ಗದ್ದೆಗೆ ಬೀಜ ಹಾಕಿದ ರೈತರಿಗೆ ಈ ಮಳೆಯಿಂದ ತುಂಬಾ ಅನುಕೂಲವಾಗಿದೆ.
ಇನ್ನು ಸುಂಟಿಕೊಪ್ಪ ಸೇರಿದಂತೆ ಕೊಡಗಿನ ಅನೇಕ ಪ್ರದೇಶಗಳಲ್ಲಿ ಈಗ ಗದ್ದೆ ಉಳುಮೆ ಕಾರ್ಯ ನಡೆಯುತ್ತಿದ್ದು, ಇನ್ನೊಂದು ವಾರದಲ್ಲಿ ಬಿತ್ತನೆ ಕಾರ್ಯವು ಸಹ ಮುಗಿದುಹೋಗಲಿದೆ.
ಕೊಡಗಿನಲ್ಲಿ ಒಂದೆಡೆ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇದರ ನಡುವೆ ಈಗ ಗದ್ದೆ ನಾಟಿ ಕಾರ್ಯ ನಡೆಯುತ್ತಿದ್ದು, ಅನ್ನದಾತರು ಫುಲ್ ಖುಷ್ ಆಗಿದ್ದಾರೆ.
ಈ ಬಾರಿ ಕೊಡಗಿನಲ್ಲಿ ಉತ್ತಮ ಮುಂಗಾರು ಮಳೆ ಆಗಿರುವ ಪರಿಣಾಮ ಫಸಲು ಉತ್ತಮ ಇಳುವರಿ ಕೊಡಲಿದೆ ಎಂದು ರೈತರು ಅಂದಾಜು ಹಾಕಿಕೊಂಡಿದ್ದಾರೆ. ಭತ್ತದ ಜೊತೆಗೆ ಇನ್ನೂ ಅನೇಕ ಬೆಳೆಗಳನ್ನು ಬೆಳೆಯಲಿದ್ದು, ರೈತರಿಗೆ ಈ ಬಾರಿಯ ಮಳೆ ವರದಾನವಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…