ಕೊಡಗು: ಕೊಡಗಿನಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಅನ್ನದಾತರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ.
ಮೇ ತಿಂಗಳಿನಲ್ಲಿ ಆರಂಭಿಕ ಮಳೆ ಉತ್ತಮವಾಗಿ ಆದ ಪರಿಣಾಮ ರೈತರು ಗದ್ದೆ ಉಳುಮೆ ಕಾರ್ಯ ಪ್ರಾರಂಭಿಸಿದ್ದಾರೆ. ತಿಂಗಳ ಮುಂಚೆಯೇ ಗದ್ದೆಗೆ ಬೀಜ ಹಾಕಿದ ರೈತರಿಗೆ ಈ ಮಳೆಯಿಂದ ತುಂಬಾ ಅನುಕೂಲವಾಗಿದೆ.
ಇನ್ನು ಸುಂಟಿಕೊಪ್ಪ ಸೇರಿದಂತೆ ಕೊಡಗಿನ ಅನೇಕ ಪ್ರದೇಶಗಳಲ್ಲಿ ಈಗ ಗದ್ದೆ ಉಳುಮೆ ಕಾರ್ಯ ನಡೆಯುತ್ತಿದ್ದು, ಇನ್ನೊಂದು ವಾರದಲ್ಲಿ ಬಿತ್ತನೆ ಕಾರ್ಯವು ಸಹ ಮುಗಿದುಹೋಗಲಿದೆ.
ಕೊಡಗಿನಲ್ಲಿ ಒಂದೆಡೆ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇದರ ನಡುವೆ ಈಗ ಗದ್ದೆ ನಾಟಿ ಕಾರ್ಯ ನಡೆಯುತ್ತಿದ್ದು, ಅನ್ನದಾತರು ಫುಲ್ ಖುಷ್ ಆಗಿದ್ದಾರೆ.
ಈ ಬಾರಿ ಕೊಡಗಿನಲ್ಲಿ ಉತ್ತಮ ಮುಂಗಾರು ಮಳೆ ಆಗಿರುವ ಪರಿಣಾಮ ಫಸಲು ಉತ್ತಮ ಇಳುವರಿ ಕೊಡಲಿದೆ ಎಂದು ರೈತರು ಅಂದಾಜು ಹಾಕಿಕೊಂಡಿದ್ದಾರೆ. ಭತ್ತದ ಜೊತೆಗೆ ಇನ್ನೂ ಅನೇಕ ಬೆಳೆಗಳನ್ನು ಬೆಳೆಯಲಿದ್ದು, ರೈತರಿಗೆ ಈ ಬಾರಿಯ ಮಳೆ ವರದಾನವಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…