ಕೊಡಗು

ಕೊಡಗಿನಲ್ಲಿ ಹೈವೇಗೆ ಗುಡ್ಡ ಕುಸಿತದ ಆತಂಕ: ರಸ್ತೆ ಸಂಪರ್ಕಗಳು ಕಡಿತ

ಕೊಡಗು: ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಯ ಅಬ್ಬರಕ್ಕೆ ಗುಡ್ಡಗಳು ಕುಸಿದು ರಸ್ತೆಗೆ ಬರುತ್ತಿವೆ. ಗುಡ್ಡದ ಮಣ್ಣು ರಸ್ತೆಯನ್ನು ಆವರಿಸಿ ಸಂಚಾರವೇ ದುಸ್ತರವಾಗಿದೆ. ಜೊತೆಗೆ ಯಾವಾಗ ಎಲ್ಲಿ ಗುಡ್ಡ ಕುಸಿಯುತ್ತದೆಯೋ ಎಂಬ ಆತಂಕ ಮನೆಮಾಡಿದೆ.

ಪ್ರತಿ ಮಳೆಗಾಲದಲ್ಲಿ ನೀರು, ಮಣ್ಣಿನ ಚಲನೆಯಿಂದ ಉಬ್ಬಿಕೊಂಡು ಸಂಚಾರಕ್ಕೆ ಸಮಸ್ಯೆಯುಂಟು ಮಾಡುವ ಕರ್ತೋಜಿ ಬಳಿಯ ರಸ್ತೆಯಲ್ಲಿ ಈ ಬಾರಿಯೂ ಅಂತಹದ್ದೇ ಸಮಸ್ಯೆ ಕಾಣಿಸಿಕೊಂಡಿದೆ. ನಿರಂತರ ಮಳೆಯಿಂದ ರಸ್ತೆಯ ಒಂದು ಬದಿ ಉಬ್ಬಿಕೊಂಡಿದ್ದು, ಗುಡ್ಡದ ಮಣ್ಣು ನಿಧಾನವಾಗಿ ರಸ್ತೆಯನ್ನಾವರಿಸುತ್ತಿದೆ. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸ್ಥಳದಲ್ಲಿಯೇ ಜೆಸಿಬಿ ಯಂತ್ರವನ್ನು ಕಾಯ್ದಿರಿಸಿ ಮಣ್ಣು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆ ಘಾಟಿ ರಸ್ತೆಯಲ್ಲಿ ಬೇರೆ ಯಾವುದೇ ಘಾಟಿಯಲ್ಲಿ ಕಾಣಿಸದ ಅಪರೂಪದ ಮತ್ತು ವಿಚಿತ್ರ ಸಮಸ್ಯೆಯೊಂದು ಎದುರಾಗುತ್ತಿದ್ದು, ಪ್ರತಿವರ್ಷ ಸಂಚಾರಕ್ಕೆ ಅಡಚಣೆ ಉಂಟಾಗುತ್ತದೆ. ಕರ್ತೋಜಿ ಬಳಿ ಗುಡ್ಡದಿಂದ ಬರುವ ಮಣ್ಣಿನಿಂದ ರಸ್ತೆ ಉಬ್ಬಿಕೊಳ್ಳುತ್ತಿರುವುದು ಈಗ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

ಕರ್ತೋಜಿಯ ಈ ಸಮಸ್ಯೆಗೆ ಜೆ ಮಾದರಿ ತಡೆಗೋಡೆ ನಿರ್ಮಾಣದಿಂದ ಪರಿಹಾರ ಸಾಧ್ಯ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದು, ಇದಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಮಡಿಕೇರಿ ವಿಭಾಗದಿಂದ ಕೇಂದ್ರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಲಾಗಿದೆ. ಸಂಪಾಜೆಯಿಂದ ಬೋಯಿಕೇರಿವರೆಗೆ ಒಟ್ಟು 26 ತಡೆಗೋಡೆಗಳನ್ನು ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪೈಕಿ 21 ತಡೆಗೋಡೆಗಳ ನಿರ್ಮಾಣಕ್ಕೆ ಒಪ್ಪಿಗೆ ಸಿಕ್ಕಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

6 mins ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

13 mins ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

18 mins ago

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

23 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

23 hours ago