ಕೊಡಗು: ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮುನ್ನೆಚ್ಚರಿಕೆ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಕೊಡಗಿನಲ್ಲಿ ಕಳೆದ ಐದು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯಿಂದ ಹಲವಡೆ ಗುಡ್ಡ ಕುಸಿತವಾಗಿದ್ದು, ಮನೆಗಳು ಕೂಡ ಜಖಂಗೊಂಡಿವೆ. ಮನೆಯಲ್ಲಿದ್ದ ಜನರನ್ನು ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಭಾರೀ ಮಳೆಗೆ ಬೃಹತ್ ಗಾತ್ರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಭಾರೀ ತೊಂದರೆ ಉಂಟಾಗಿದೆ.
ಮಳೆಯ ಆರ್ಭಟಕ್ಕೆ ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಕಾವೇರಿ ನದಿ ತುಂಬಿ ಹರಿಯುತ್ತಿರುವ ಪರಿಣಾಮ ಪ್ರವಾಹ ಉಂಟಾಗಿದ್ದು, ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಬಳಿಯಿರುವ ದುಬಾರೆ ಆನೆ ಶಿಬಿರಕ್ಕೆ ಅರಣ್ಯ ಇಲಾಖೆ ನಿಷೇಧ ಹೇರಿದೆ. ಸುರಕ್ಷತೆ ದೃಷ್ಟಿಯಿಂದ ದುಬಾರೆ ಪ್ರವಾಸಿ ತಾಣಕ್ಕೆ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದ್ದು, ವೀಕೆಂಡ್ನಲ್ಲಿ ಪ್ರವಾಸದ ಪ್ಲಾನ್ನಲ್ಲಿದ್ದ ಪ್ರವಾಸಿಗರಿಗೆ ಭಾರೀ ಬೇಸರವಾಗಿದೆ.
ಮಳೆ ಅವಾಂತರಕ್ಕೆ ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತವಾಗಿದ್ದು, ಪವಿತ್ರ ಸ್ನಾನಘಟ್ಟ ಜಲಾವೃತವಾಗಿ ಭಕ್ತರು ಪರದಾಡುವಂತಾಗಿದೆ. ಸ್ನಾನಘಟ್ಟದ ಮುಖ್ಯ ದ್ವಾರದವರೆಗೂ ನೀರಿನ ಮಟ್ಟ ಏರಿಕೆಯಾಗಿದ್ದು, ದ್ವಾರದಲ್ಲೇ ಪಿಂಡ ಪ್ರಧಾನ ಮಾಡುವ ಸಂಧರ್ಭ ಒದಗಿ ಬಂದಿದೆ.
ಕಾವೇರಿ ನದಿಯಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರಿಗೆ ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಯಾರೂ ನದಿ ಬಳಿ ಹೋಗಬಾರದು ಎಂದು ಮನವಿ ಮಾಡಿದ್ದಾರೆ. ಇದರ ಜೊತೆಗೆ ಕಾವೇರಿ ನದಿ ವೀಕ್ಷಣೆಗೂ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…