ಕೊಡಗು

ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆ ; ಪ್ರವಾಹ ಭೀತಿ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹದ ಭೀತಿ ಸೃಷ್ಟಿಯಾಗಿದೆ.

ಸೋಮವಾರ ರಾತ್ರಿ ಹಾಗೂ ಮಂಗಳವಾರ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ. ಹಳ್ಳ, ಕೊಳ್ಳ, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ಏರಿಕೆಯಾಗುತ್ತಿದೆ.

ಮುಂಜಾಗ್ರತಾ ಕ್ರಮವಾಗಿ ಸುಮಾರು ೧೮,೦೦೦ ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ನದಿಗೆ ಹರಿಯಬಿಡಲಾಗುತ್ತಿದ್ದು, ತಗ್ಗು ಪ್ರದೇಶಗಳು ಮುಳುಗಡೆಯಾಗುವ ಭೀತಿ ಎದುರಾಗಿದೆ. ಜಲಾಶಯದ ಮುಂಭಾಗದ ಸೇತುವೆ ಮುಳುಗಡೆಯಾಗಿದ್ದು, ಸ್ಥಳದಲ್ಲಿ ಅಗತ್ಯ ಮುನ್ನಚ್ಚರಿಕೆ ವಹಿಸಲಾಗಿದೆ.

ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ಭರ್ತಿಯಾಗಿದೆ. ಮೇಲ್ಸೇತುವೆ ಮೂಲಕ ವಾಹನ ಸಂಚರಿಸುತ್ತಿರುವುದರಿಂದ ಹೆಚ್ಚಿನ ಸಮಸ್ಯೆಯಾಗಿಲ್ಲ. ಆದರೆ, ಮಳೆ ಮತ್ತಷ್ಟು ಹೆಚ್ಚಾದಲ್ಲಿ ಭಗಂಡೇಶ್ವರ ದೇವಾಲಯದ ಮೆಟ್ಟಿಲವರೆಗೆ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇದೆ.

ವರುಣನ ಆರ್ಭಟದಿಂದ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ಗುಹ್ಯ, ಕರಡಿಗೋಡು, ಕೂಡುಗದ್ದೆ, ಚೆರಿಯಪರಂಬು ಮತ್ತಿತರ ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಸ್ಥಳಕ್ಕೆ ಅಽಕಾರಿಗಳು ಭೇಟಿ ನೀಡಿ ಅಗತ್ಯ ಮುನ್ನಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ಅಗತ್ಯವಿರುವೆಡೆ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಅಪಾಯಕಾರಿ ಸ್ಥಳದಲ್ಲಿರುವವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಲಾಗಿದೆ. ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜುವರೆಗಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

ಜಿಲ್ಲೆಯ ಮಳೆ ವಿವರ: ಜಿಲ್ಲೆಯಲ್ಲಿ ಕಳೆದ ೨೪ ಗಂಟೆಗಳ ಅವಽಯಲ್ಲಿ ೭೫.೬೭ ಮಿ.ಮೀ. ಸರಾಸರಿ ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೮.೩೬ ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ ೯೮೯.೫೧ ಮಿ.ಮೀ, ಕಳೆದ ವರ್ಷ ಇದೇ ಅವಽಯಲ್ಲಿ ೪೯೬.೪೨ ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ೧೨೨.೪೫ ಮಿ.ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ ೭೨.೧೦ ಮಿ.ಮೀ., ಪೊನ್ನಂಪೇಟೆ ತಾಲ್ಲೂಕಿನಲ್ಲಿ ೭೧.೦೭ ಮಿ.ಮೀ., ಸೋಮವಾರಪೇಟೆ ತಾಲ್ಲೂಕಿನಲ್ಲಿ ೭೪.೩೫ ಮಿ.ಮೀ., ಕುಶಾಲನಗರ ತಾಲ್ಲೂಕಿನಲ್ಲಿ ೩೮.೪೦ ಮಿ.ಮೀ. ಮಳೆಯಾಗಿದೆ. ಮಡಿಕೇರಿ ಕಸಬಾ ೯೦, ನಾಪೋಕ್ಲು ೮೮.೮೦, ಸಂಪಾಜೆ ೧೧೬, ಭಾಗಮಂಡಲ ೧೯೫, ವಿರಾಜಪೇಟೆ ೭೭.೨೦, ಅಮ್ಮತ್ತಿ ೬೭, ಹುದಿಕೇರಿ ೮೭.೬೦, ಶ್ರೀಮಂಗಲ ೫೬.೬೦, ಪೊನ್ನಂಪೇಟೆ ೮೦, ಬಾಳೆಲೆ ೬೦.೦೯, ಸೋಮವಾರಪೇಟೆ ೭೪, ಶನಿವಾರಸಂತೆ ೪೮, ಶಾಂತಳ್ಳಿ ೧೪೦, ಕೊಡ್ಲಿಪೇಟೆ ೩೫.೪೦, ಕುಶಾಲನಗರ ೨೪.೮೦, ಸುಂಟಿಕೊಪ್ಪದಲ್ಲಿ ೫೨ ಮಿ.ಮೀ. ಮಳೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

6 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

7 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

7 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

8 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

8 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

8 hours ago