ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹದ ಭೀತಿ ಸೃಷ್ಟಿಯಾಗಿದೆ.
ಸೋಮವಾರ ರಾತ್ರಿ ಹಾಗೂ ಮಂಗಳವಾರ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ. ಹಳ್ಳ, ಕೊಳ್ಳ, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ಏರಿಕೆಯಾಗುತ್ತಿದೆ.
ಮುಂಜಾಗ್ರತಾ ಕ್ರಮವಾಗಿ ಸುಮಾರು ೧೮,೦೦೦ ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ನದಿಗೆ ಹರಿಯಬಿಡಲಾಗುತ್ತಿದ್ದು, ತಗ್ಗು ಪ್ರದೇಶಗಳು ಮುಳುಗಡೆಯಾಗುವ ಭೀತಿ ಎದುರಾಗಿದೆ. ಜಲಾಶಯದ ಮುಂಭಾಗದ ಸೇತುವೆ ಮುಳುಗಡೆಯಾಗಿದ್ದು, ಸ್ಥಳದಲ್ಲಿ ಅಗತ್ಯ ಮುನ್ನಚ್ಚರಿಕೆ ವಹಿಸಲಾಗಿದೆ.
ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ಭರ್ತಿಯಾಗಿದೆ. ಮೇಲ್ಸೇತುವೆ ಮೂಲಕ ವಾಹನ ಸಂಚರಿಸುತ್ತಿರುವುದರಿಂದ ಹೆಚ್ಚಿನ ಸಮಸ್ಯೆಯಾಗಿಲ್ಲ. ಆದರೆ, ಮಳೆ ಮತ್ತಷ್ಟು ಹೆಚ್ಚಾದಲ್ಲಿ ಭಗಂಡೇಶ್ವರ ದೇವಾಲಯದ ಮೆಟ್ಟಿಲವರೆಗೆ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇದೆ.
ವರುಣನ ಆರ್ಭಟದಿಂದ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ಗುಹ್ಯ, ಕರಡಿಗೋಡು, ಕೂಡುಗದ್ದೆ, ಚೆರಿಯಪರಂಬು ಮತ್ತಿತರ ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಸ್ಥಳಕ್ಕೆ ಅಽಕಾರಿಗಳು ಭೇಟಿ ನೀಡಿ ಅಗತ್ಯ ಮುನ್ನಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ಅಗತ್ಯವಿರುವೆಡೆ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಅಪಾಯಕಾರಿ ಸ್ಥಳದಲ್ಲಿರುವವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಲಾಗಿದೆ. ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜುವರೆಗಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ಜಿಲ್ಲೆಯ ಮಳೆ ವಿವರ: ಜಿಲ್ಲೆಯಲ್ಲಿ ಕಳೆದ ೨೪ ಗಂಟೆಗಳ ಅವಽಯಲ್ಲಿ ೭೫.೬೭ ಮಿ.ಮೀ. ಸರಾಸರಿ ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೮.೩೬ ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ ೯೮೯.೫೧ ಮಿ.ಮೀ, ಕಳೆದ ವರ್ಷ ಇದೇ ಅವಽಯಲ್ಲಿ ೪೯೬.೪೨ ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ೧೨೨.೪೫ ಮಿ.ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ ೭೨.೧೦ ಮಿ.ಮೀ., ಪೊನ್ನಂಪೇಟೆ ತಾಲ್ಲೂಕಿನಲ್ಲಿ ೭೧.೦೭ ಮಿ.ಮೀ., ಸೋಮವಾರಪೇಟೆ ತಾಲ್ಲೂಕಿನಲ್ಲಿ ೭೪.೩೫ ಮಿ.ಮೀ., ಕುಶಾಲನಗರ ತಾಲ್ಲೂಕಿನಲ್ಲಿ ೩೮.೪೦ ಮಿ.ಮೀ. ಮಳೆಯಾಗಿದೆ. ಮಡಿಕೇರಿ ಕಸಬಾ ೯೦, ನಾಪೋಕ್ಲು ೮೮.೮೦, ಸಂಪಾಜೆ ೧೧೬, ಭಾಗಮಂಡಲ ೧೯೫, ವಿರಾಜಪೇಟೆ ೭೭.೨೦, ಅಮ್ಮತ್ತಿ ೬೭, ಹುದಿಕೇರಿ ೮೭.೬೦, ಶ್ರೀಮಂಗಲ ೫೬.೬೦, ಪೊನ್ನಂಪೇಟೆ ೮೦, ಬಾಳೆಲೆ ೬೦.೦೯, ಸೋಮವಾರಪೇಟೆ ೭೪, ಶನಿವಾರಸಂತೆ ೪೮, ಶಾಂತಳ್ಳಿ ೧೪೦, ಕೊಡ್ಲಿಪೇಟೆ ೩೫.೪೦, ಕುಶಾಲನಗರ ೨೪.೮೦, ಸುಂಟಿಕೊಪ್ಪದಲ್ಲಿ ೫೨ ಮಿ.ಮೀ. ಮಳೆಯಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…