ಕೊಡಗು

ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆ ; ಪ್ರವಾಹ ಭೀತಿ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹದ ಭೀತಿ ಸೃಷ್ಟಿಯಾಗಿದೆ.

ಸೋಮವಾರ ರಾತ್ರಿ ಹಾಗೂ ಮಂಗಳವಾರ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ. ಹಳ್ಳ, ಕೊಳ್ಳ, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ಏರಿಕೆಯಾಗುತ್ತಿದೆ.

ಮುಂಜಾಗ್ರತಾ ಕ್ರಮವಾಗಿ ಸುಮಾರು ೧೮,೦೦೦ ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ನದಿಗೆ ಹರಿಯಬಿಡಲಾಗುತ್ತಿದ್ದು, ತಗ್ಗು ಪ್ರದೇಶಗಳು ಮುಳುಗಡೆಯಾಗುವ ಭೀತಿ ಎದುರಾಗಿದೆ. ಜಲಾಶಯದ ಮುಂಭಾಗದ ಸೇತುವೆ ಮುಳುಗಡೆಯಾಗಿದ್ದು, ಸ್ಥಳದಲ್ಲಿ ಅಗತ್ಯ ಮುನ್ನಚ್ಚರಿಕೆ ವಹಿಸಲಾಗಿದೆ.

ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ಭರ್ತಿಯಾಗಿದೆ. ಮೇಲ್ಸೇತುವೆ ಮೂಲಕ ವಾಹನ ಸಂಚರಿಸುತ್ತಿರುವುದರಿಂದ ಹೆಚ್ಚಿನ ಸಮಸ್ಯೆಯಾಗಿಲ್ಲ. ಆದರೆ, ಮಳೆ ಮತ್ತಷ್ಟು ಹೆಚ್ಚಾದಲ್ಲಿ ಭಗಂಡೇಶ್ವರ ದೇವಾಲಯದ ಮೆಟ್ಟಿಲವರೆಗೆ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇದೆ.

ವರುಣನ ಆರ್ಭಟದಿಂದ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ಗುಹ್ಯ, ಕರಡಿಗೋಡು, ಕೂಡುಗದ್ದೆ, ಚೆರಿಯಪರಂಬು ಮತ್ತಿತರ ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಸ್ಥಳಕ್ಕೆ ಅಽಕಾರಿಗಳು ಭೇಟಿ ನೀಡಿ ಅಗತ್ಯ ಮುನ್ನಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ಅಗತ್ಯವಿರುವೆಡೆ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಅಪಾಯಕಾರಿ ಸ್ಥಳದಲ್ಲಿರುವವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಲಾಗಿದೆ. ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜುವರೆಗಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

ಜಿಲ್ಲೆಯ ಮಳೆ ವಿವರ: ಜಿಲ್ಲೆಯಲ್ಲಿ ಕಳೆದ ೨೪ ಗಂಟೆಗಳ ಅವಽಯಲ್ಲಿ ೭೫.೬೭ ಮಿ.ಮೀ. ಸರಾಸರಿ ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೮.೩೬ ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ ೯೮೯.೫೧ ಮಿ.ಮೀ, ಕಳೆದ ವರ್ಷ ಇದೇ ಅವಽಯಲ್ಲಿ ೪೯೬.೪೨ ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ೧೨೨.೪೫ ಮಿ.ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ ೭೨.೧೦ ಮಿ.ಮೀ., ಪೊನ್ನಂಪೇಟೆ ತಾಲ್ಲೂಕಿನಲ್ಲಿ ೭೧.೦೭ ಮಿ.ಮೀ., ಸೋಮವಾರಪೇಟೆ ತಾಲ್ಲೂಕಿನಲ್ಲಿ ೭೪.೩೫ ಮಿ.ಮೀ., ಕುಶಾಲನಗರ ತಾಲ್ಲೂಕಿನಲ್ಲಿ ೩೮.೪೦ ಮಿ.ಮೀ. ಮಳೆಯಾಗಿದೆ. ಮಡಿಕೇರಿ ಕಸಬಾ ೯೦, ನಾಪೋಕ್ಲು ೮೮.೮೦, ಸಂಪಾಜೆ ೧೧೬, ಭಾಗಮಂಡಲ ೧೯೫, ವಿರಾಜಪೇಟೆ ೭೭.೨೦, ಅಮ್ಮತ್ತಿ ೬೭, ಹುದಿಕೇರಿ ೮೭.೬೦, ಶ್ರೀಮಂಗಲ ೫೬.೬೦, ಪೊನ್ನಂಪೇಟೆ ೮೦, ಬಾಳೆಲೆ ೬೦.೦೯, ಸೋಮವಾರಪೇಟೆ ೭೪, ಶನಿವಾರಸಂತೆ ೪೮, ಶಾಂತಳ್ಳಿ ೧೪೦, ಕೊಡ್ಲಿಪೇಟೆ ೩೫.೪೦, ಕುಶಾಲನಗರ ೨೪.೮೦, ಸುಂಟಿಕೊಪ್ಪದಲ್ಲಿ ೫೨ ಮಿ.ಮೀ. ಮಳೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಮಲೆ ಮಹದೇಶ್ವರದಲ್ಲಿ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

10 mins ago

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

5 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

5 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

5 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

5 hours ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

6 hours ago