ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹದ ಭೀತಿ ಸೃಷ್ಟಿಯಾಗಿದೆ.
ಸೋಮವಾರ ರಾತ್ರಿ ಹಾಗೂ ಮಂಗಳವಾರ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ. ಹಳ್ಳ, ಕೊಳ್ಳ, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ಏರಿಕೆಯಾಗುತ್ತಿದೆ.
ಮುಂಜಾಗ್ರತಾ ಕ್ರಮವಾಗಿ ಸುಮಾರು ೧೮,೦೦೦ ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ನದಿಗೆ ಹರಿಯಬಿಡಲಾಗುತ್ತಿದ್ದು, ತಗ್ಗು ಪ್ರದೇಶಗಳು ಮುಳುಗಡೆಯಾಗುವ ಭೀತಿ ಎದುರಾಗಿದೆ. ಜಲಾಶಯದ ಮುಂಭಾಗದ ಸೇತುವೆ ಮುಳುಗಡೆಯಾಗಿದ್ದು, ಸ್ಥಳದಲ್ಲಿ ಅಗತ್ಯ ಮುನ್ನಚ್ಚರಿಕೆ ವಹಿಸಲಾಗಿದೆ.
ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ಭರ್ತಿಯಾಗಿದೆ. ಮೇಲ್ಸೇತುವೆ ಮೂಲಕ ವಾಹನ ಸಂಚರಿಸುತ್ತಿರುವುದರಿಂದ ಹೆಚ್ಚಿನ ಸಮಸ್ಯೆಯಾಗಿಲ್ಲ. ಆದರೆ, ಮಳೆ ಮತ್ತಷ್ಟು ಹೆಚ್ಚಾದಲ್ಲಿ ಭಗಂಡೇಶ್ವರ ದೇವಾಲಯದ ಮೆಟ್ಟಿಲವರೆಗೆ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇದೆ.
ವರುಣನ ಆರ್ಭಟದಿಂದ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ಗುಹ್ಯ, ಕರಡಿಗೋಡು, ಕೂಡುಗದ್ದೆ, ಚೆರಿಯಪರಂಬು ಮತ್ತಿತರ ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಸ್ಥಳಕ್ಕೆ ಅಽಕಾರಿಗಳು ಭೇಟಿ ನೀಡಿ ಅಗತ್ಯ ಮುನ್ನಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ಅಗತ್ಯವಿರುವೆಡೆ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಅಪಾಯಕಾರಿ ಸ್ಥಳದಲ್ಲಿರುವವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಲಾಗಿದೆ. ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜುವರೆಗಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ಜಿಲ್ಲೆಯ ಮಳೆ ವಿವರ: ಜಿಲ್ಲೆಯಲ್ಲಿ ಕಳೆದ ೨೪ ಗಂಟೆಗಳ ಅವಽಯಲ್ಲಿ ೭೫.೬೭ ಮಿ.ಮೀ. ಸರಾಸರಿ ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೮.೩೬ ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ ೯೮೯.೫೧ ಮಿ.ಮೀ, ಕಳೆದ ವರ್ಷ ಇದೇ ಅವಽಯಲ್ಲಿ ೪೯೬.೪೨ ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ೧೨೨.೪೫ ಮಿ.ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ ೭೨.೧೦ ಮಿ.ಮೀ., ಪೊನ್ನಂಪೇಟೆ ತಾಲ್ಲೂಕಿನಲ್ಲಿ ೭೧.೦೭ ಮಿ.ಮೀ., ಸೋಮವಾರಪೇಟೆ ತಾಲ್ಲೂಕಿನಲ್ಲಿ ೭೪.೩೫ ಮಿ.ಮೀ., ಕುಶಾಲನಗರ ತಾಲ್ಲೂಕಿನಲ್ಲಿ ೩೮.೪೦ ಮಿ.ಮೀ. ಮಳೆಯಾಗಿದೆ. ಮಡಿಕೇರಿ ಕಸಬಾ ೯೦, ನಾಪೋಕ್ಲು ೮೮.೮೦, ಸಂಪಾಜೆ ೧೧೬, ಭಾಗಮಂಡಲ ೧೯೫, ವಿರಾಜಪೇಟೆ ೭೭.೨೦, ಅಮ್ಮತ್ತಿ ೬೭, ಹುದಿಕೇರಿ ೮೭.೬೦, ಶ್ರೀಮಂಗಲ ೫೬.೬೦, ಪೊನ್ನಂಪೇಟೆ ೮೦, ಬಾಳೆಲೆ ೬೦.೦೯, ಸೋಮವಾರಪೇಟೆ ೭೪, ಶನಿವಾರಸಂತೆ ೪೮, ಶಾಂತಳ್ಳಿ ೧೪೦, ಕೊಡ್ಲಿಪೇಟೆ ೩೫.೪೦, ಕುಶಾಲನಗರ ೨೪.೮೦, ಸುಂಟಿಕೊಪ್ಪದಲ್ಲಿ ೫೨ ಮಿ.ಮೀ. ಮಳೆಯಾಗಿದೆ.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…