ಕೊಡಗು: ಮಳೆಗಾಲ ಎಂದಾಕ್ಷಣ ಕೊಡಗಿನ ಜನರಲ್ಲಿ ನಡುಕ ಹುಟ್ಟುತ್ತದೆ. ತೋಟದ ನಡುವೆ, ನದಿ ತಟದ ಪ್ರದೇಶಗಳಲ್ಲಿ, ಬೆಟ್ಟಗುಡ್ಡಗಳ ತಪ್ಪಲಲ್ಲಿ ಮನೆ ಕಟ್ಟಿಕೊಂಡು ಜೀವನ ನಡೆಸುವವರೆಲ್ಲರೂ ಭಯದಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹಿಂದಿನ ಕಾಲದಲ್ಲಿ ಸುರಿಯುತ್ತಿದ್ದ ಮಳೆಗೂ ಈಗ ಸುರಿಯುವ ಮಳೆಗೂ ಭಾರೀ ವ್ಯತ್ಯಾಸ ಕಾಣುತ್ತಿದೆ. ಮೊದಲೆಲ್ಲಾ ಜಿಟಿ ಜಿಟಿ ಸುರಿಯುತ್ತಾ ಮಳೆ ವೇಗ ಪಡೆದುಕೊಳ್ಳುತ್ತಿತ್ತು. ಜುಲೈ ತಿಂಗಳ ಹೊತ್ತಿಗೆ ಎಲ್ಲೆಂದರಲ್ಲಿ ಅಂತರ್ಜಲಗಳು ಹೆಚ್ಚಾಗಿ ನೀರಾಗಿ ಹರಿಯಲಾರಂಭಿಸುತ್ತಿದ್ದವು. ಇದರಿಂದ ಮಳೆ ಕಡಿಮೆಯಾದರೂ ಜಲ ನೀರು ನದಿಗಳನ್ನು ಸೇರುತ್ತಿದ್ದರಿಂದ ನದಿ ನೀರಿನ ಪ್ರಮಾಣ ಕಡಿಮೆಯಾಗುತ್ತಿರಲಿಲ್ಲ. ಆದರೆ ಈಗ ಒಮ್ಮೆಲೆ ಮಳೆ ಸುರಿದಾಗ ನೀರು ಕೂಡ ಎಲ್ಲೆಂದರಲ್ಲಿ ಹರಿದು ಬರುತ್ತದೆ. ಮಳೆ ಕಡಿಮೆಯಾಗುತ್ತಿದ್ದಂತೆಯೇ ನದಿಗಳಲ್ಲಿ ನೀರಿನ ಪ್ರಮಾಣವು ಕಡಿಮೆಯಾಗಿ ಬಿಡುತ್ತಿದೆ.
ಇನ್ನು ಮಳೆಗಾಲದಲ್ಲಿ ರಸ್ತೆಗಳು ಕೆಸರುಮಯವಾಗಿ ಓಡಾಡುವುದೇ ಕಷ್ಟವಾಗುತ್ತದೆ. ಇದರ ಜೊತೆಗೆ ಬೆಟ್ಟಗುಡ್ಡ, ಕಂದಕಗಳಲ್ಲಿ ಮನೆ ಮಾಡಿಕೊಂಡಿರುವ ಸ್ಥಳಗಳಿಗೆ ವಾಹನಗಳೇ ತೆರಳುವುದಿಲ್ಲ. ಕೆಲವು ಕಡೆಗಳಲ್ಲಿ ನದಿ ತುಂಬಿ ಹರಿದಾಗ ಸಂಪರ್ಕವೇ ಕಡಿತಗೊಳ್ಳುತ್ತದೆ. ಆಗಾಗ್ಗೆ ಮರಗಳು ಬೀಳುವುದು, ವಿದ್ಯುತ್ ಕಂಬಗಳು ಮುರಿಯುವುದು ಹೀಗೆ ಹಲವು ಸಮಸ್ಯೆಗಳಿಂದಾಗಿ ವಿದ್ಯುತ್ ಕೈಕೊಡುತ್ತದೆ. ಮಳೆಯಲ್ಲಿಯೇ ಗದ್ದೆ ತೋಟಗಳಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯತೆ. ಹೀಗೆ ಹತ್ತಾರು ಜಂಜಾಟಗಳ ನಡುವೆ ಇಲ್ಲಿನವರ ಬದುಕು ಸಾಗುತ್ತದೆ.
ಇದೆಲ್ಲದರ ನಡುವೆ ಕೊಡಗಿನ ಮಳೆಗಾಲ ಮತ್ತು ಮಳೆಗಾಲದಲ್ಲಿ ಆಚರಿಸಲ್ಪಡುವ ಆಚರಣೆಗಳು, ತಿನಿಸುಗಳು, ಕೃಷಿ ಚಟುವಟಿಕೆ ಎಲ್ಲವೂ ಭಿನ್ನವಾಗಿರುತ್ತವೆ. ಬಹುಶಃ ಇಲ್ಲಿನವರು ಮಳೆಗಾಲದಲ್ಲಿ ಏನೇ ಸಂಕಷ್ಟ ಅನುಭವಿಸಿದರೂ ಅದರಾಚೆಗೆ ಮಳೆಗಾಲವನ್ನು ಧೈರ್ಯವಾಗಿ ಮತ್ತು ಖುಷಿಯಿಂದಲೇ ಎದುರಿಸುತ್ತಾರೆ.
ಇನ್ನೂ ಮಳೆಗಾಲದಲ್ಲಿ ಸುತ್ತಮುತ್ತಲ ಪ್ರದೇಶಗಳಲ್ಲಿ ಸಿಗುವ ಗಿಡಮೂಲಿಕೆಗಳನ್ನು ಬಳಸಿ ಆಹಾರ ಪದಾರ್ಥಗಳನ್ನು ತಯಾರಿಸಿ ಮನೆಮಂದಿಯೆಲ್ಲಾ ಸೇವಿಸುತ್ತಾರೆ. ಈ ನಡುವೆ ಮಳೆಗಾಲದಲ್ಲಿಯೇ ಇಲ್ಲಿ ಭತ್ತದ ಕೃಷಿ ಆರಂಭವಾಗುತ್ತದೆ. ಬೆಳಿಗ್ಗೆಯಿಂದ ರಾತ್ರಿವರೆಗೂ ಮಳೆ ನಡುವೆ ಕೆಸರು ನೀರು ತುಂಬಿದ ಗದ್ದೆಯಲ್ಲಿ ಸೊಂಟ ಬಗ್ಗಿಸಿ ನಾಟಿ ನೆಡುವುದು ಸುಲಭದ ಕೆಲಸವಲ್ಲ. ಅದನ್ನು ಮಾಡಬೇಕಾದರೆ ದೈಹಿಕವಾಗಿ ಶಕ್ತಿಬೇಕು. ಇಂತಹ ಶಕ್ತಿಯನ್ನು ಇಲ್ಲಿ ಸ್ಥಳೀಯ ಆಹಾರಗಳು ನೀಡುತ್ತವೆ.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…