ಕೊಡಗು

ಮಳೆಗಾಲದಲ್ಲಿ ಕೊಡಗು ಜನತೆಯ ಬದುಕು ಹೇಗಿದೆ ಗೊತ್ತಾ.?

ಕೊಡಗು: ಮಳೆಗಾಲ ಎಂದಾಕ್ಷಣ ಕೊಡಗಿನ ಜನರಲ್ಲಿ ನಡುಕ ಹುಟ್ಟುತ್ತದೆ. ತೋಟದ ನಡುವೆ, ನದಿ ತಟದ ಪ್ರದೇಶಗಳಲ್ಲಿ, ಬೆಟ್ಟಗುಡ್ಡಗಳ ತಪ್ಪಲಲ್ಲಿ ಮನೆ ಕಟ್ಟಿಕೊಂಡು ಜೀವನ ನಡೆಸುವವರೆಲ್ಲರೂ ಭಯದಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಂದಿನ ಕಾಲದಲ್ಲಿ ಸುರಿಯುತ್ತಿದ್ದ ಮಳೆಗೂ ಈಗ ಸುರಿಯುವ ಮಳೆಗೂ ಭಾರೀ ವ್ಯತ್ಯಾಸ ಕಾಣುತ್ತಿದೆ. ಮೊದಲೆಲ್ಲಾ ಜಿಟಿ ಜಿಟಿ ಸುರಿಯುತ್ತಾ ಮಳೆ ವೇಗ ಪಡೆದುಕೊಳ್ಳುತ್ತಿತ್ತು. ಜುಲೈ ತಿಂಗಳ ಹೊತ್ತಿಗೆ ಎಲ್ಲೆಂದರಲ್ಲಿ ಅಂತರ್ಜಲಗಳು ಹೆಚ್ಚಾಗಿ ನೀರಾಗಿ ಹರಿಯಲಾರಂಭಿಸುತ್ತಿದ್ದವು. ಇದರಿಂದ ಮಳೆ ಕಡಿಮೆಯಾದರೂ ಜಲ ನೀರು ನದಿಗಳನ್ನು ಸೇರುತ್ತಿದ್ದರಿಂದ ನದಿ ನೀರಿನ ಪ್ರಮಾಣ ಕಡಿಮೆಯಾಗುತ್ತಿರಲಿಲ್ಲ. ಆದರೆ ಈಗ ಒಮ್ಮೆಲೆ ಮಳೆ ಸುರಿದಾಗ ನೀರು ಕೂಡ ಎಲ್ಲೆಂದರಲ್ಲಿ ಹರಿದು ಬರುತ್ತದೆ. ಮಳೆ ಕಡಿಮೆಯಾಗುತ್ತಿದ್ದಂತೆಯೇ ನದಿಗಳಲ್ಲಿ ನೀರಿನ ಪ್ರಮಾಣವು ಕಡಿಮೆಯಾಗಿ ಬಿಡುತ್ತಿದೆ.

ಇನ್ನು ಮಳೆಗಾಲದಲ್ಲಿ ರಸ್ತೆಗಳು ಕೆಸರುಮಯವಾಗಿ ಓಡಾಡುವುದೇ ಕಷ್ಟವಾಗುತ್ತದೆ. ಇದರ ಜೊತೆಗೆ ಬೆಟ್ಟಗುಡ್ಡ, ಕಂದಕಗಳಲ್ಲಿ ಮನೆ ಮಾಡಿಕೊಂಡಿರುವ ಸ್ಥಳಗಳಿಗೆ ವಾಹನಗಳೇ ತೆರಳುವುದಿಲ್ಲ. ಕೆಲವು ಕಡೆಗಳಲ್ಲಿ ನದಿ ತುಂಬಿ ಹರಿದಾಗ ಸಂಪರ್ಕವೇ ಕಡಿತಗೊಳ್ಳುತ್ತದೆ. ಆಗಾಗ್ಗೆ ಮರಗಳು ಬೀಳುವುದು, ವಿದ್ಯುತ್‌ ಕಂಬಗಳು ಮುರಿಯುವುದು ಹೀಗೆ ಹಲವು ಸಮಸ್ಯೆಗಳಿಂದಾಗಿ ವಿದ್ಯುತ್‌ ಕೈಕೊಡುತ್ತದೆ. ಮಳೆಯಲ್ಲಿಯೇ ಗದ್ದೆ ತೋಟಗಳಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯತೆ. ಹೀಗೆ ಹತ್ತಾರು ಜಂಜಾಟಗಳ ನಡುವೆ ಇಲ್ಲಿನವರ ಬದುಕು ಸಾಗುತ್ತದೆ.

ಇದೆಲ್ಲದರ ನಡುವೆ ಕೊಡಗಿನ ಮಳೆಗಾಲ ಮತ್ತು ಮಳೆಗಾಲದಲ್ಲಿ ಆಚರಿಸಲ್ಪಡುವ ಆಚರಣೆಗಳು, ತಿನಿಸುಗಳು, ಕೃಷಿ ಚಟುವಟಿಕೆ ಎಲ್ಲವೂ ಭಿನ್ನವಾಗಿರುತ್ತವೆ. ಬಹುಶಃ ಇಲ್ಲಿನವರು ಮಳೆಗಾಲದಲ್ಲಿ ಏನೇ ಸಂಕಷ್ಟ ಅನುಭವಿಸಿದರೂ ಅದರಾಚೆಗೆ ಮಳೆಗಾಲವನ್ನು ಧೈರ್ಯವಾಗಿ ಮತ್ತು ಖುಷಿಯಿಂದಲೇ ಎದುರಿಸುತ್ತಾರೆ.

ಇನ್ನೂ ಮಳೆಗಾಲದಲ್ಲಿ ಸುತ್ತಮುತ್ತಲ ಪ್ರದೇಶಗಳಲ್ಲಿ ಸಿಗುವ ಗಿಡಮೂಲಿಕೆಗಳನ್ನು ಬಳಸಿ ಆಹಾರ ಪದಾರ್ಥಗಳನ್ನು ತಯಾರಿಸಿ ಮನೆಮಂದಿಯೆಲ್ಲಾ ಸೇವಿಸುತ್ತಾರೆ. ಈ ನಡುವೆ ಮಳೆಗಾಲದಲ್ಲಿಯೇ ಇಲ್ಲಿ ಭತ್ತದ ಕೃಷಿ ಆರಂಭವಾಗುತ್ತದೆ. ಬೆಳಿಗ್ಗೆಯಿಂದ ರಾತ್ರಿವರೆಗೂ ಮಳೆ ನಡುವೆ ಕೆಸರು ನೀರು ತುಂಬಿದ ಗದ್ದೆಯಲ್ಲಿ ಸೊಂಟ ಬಗ್ಗಿಸಿ ನಾಟಿ ನೆಡುವುದು ಸುಲಭದ ಕೆಲಸವಲ್ಲ. ಅದನ್ನು ಮಾಡಬೇಕಾದರೆ ದೈಹಿಕವಾಗಿ ಶಕ್ತಿಬೇಕು. ಇಂತಹ ಶಕ್ತಿಯನ್ನು ಇಲ್ಲಿ ಸ್ಥಳೀಯ ಆಹಾರಗಳು ನೀಡುತ್ತವೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

8 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

9 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

9 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

10 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

10 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

10 hours ago