ಕೊಡಗು

ಮಳೆಗಾಲದಲ್ಲಿ ಕೊಡಗು ಜನತೆಯ ಬದುಕು ಹೇಗಿದೆ ಗೊತ್ತಾ.?

ಕೊಡಗು: ಮಳೆಗಾಲ ಎಂದಾಕ್ಷಣ ಕೊಡಗಿನ ಜನರಲ್ಲಿ ನಡುಕ ಹುಟ್ಟುತ್ತದೆ. ತೋಟದ ನಡುವೆ, ನದಿ ತಟದ ಪ್ರದೇಶಗಳಲ್ಲಿ, ಬೆಟ್ಟಗುಡ್ಡಗಳ ತಪ್ಪಲಲ್ಲಿ ಮನೆ ಕಟ್ಟಿಕೊಂಡು ಜೀವನ ನಡೆಸುವವರೆಲ್ಲರೂ ಭಯದಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಂದಿನ ಕಾಲದಲ್ಲಿ ಸುರಿಯುತ್ತಿದ್ದ ಮಳೆಗೂ ಈಗ ಸುರಿಯುವ ಮಳೆಗೂ ಭಾರೀ ವ್ಯತ್ಯಾಸ ಕಾಣುತ್ತಿದೆ. ಮೊದಲೆಲ್ಲಾ ಜಿಟಿ ಜಿಟಿ ಸುರಿಯುತ್ತಾ ಮಳೆ ವೇಗ ಪಡೆದುಕೊಳ್ಳುತ್ತಿತ್ತು. ಜುಲೈ ತಿಂಗಳ ಹೊತ್ತಿಗೆ ಎಲ್ಲೆಂದರಲ್ಲಿ ಅಂತರ್ಜಲಗಳು ಹೆಚ್ಚಾಗಿ ನೀರಾಗಿ ಹರಿಯಲಾರಂಭಿಸುತ್ತಿದ್ದವು. ಇದರಿಂದ ಮಳೆ ಕಡಿಮೆಯಾದರೂ ಜಲ ನೀರು ನದಿಗಳನ್ನು ಸೇರುತ್ತಿದ್ದರಿಂದ ನದಿ ನೀರಿನ ಪ್ರಮಾಣ ಕಡಿಮೆಯಾಗುತ್ತಿರಲಿಲ್ಲ. ಆದರೆ ಈಗ ಒಮ್ಮೆಲೆ ಮಳೆ ಸುರಿದಾಗ ನೀರು ಕೂಡ ಎಲ್ಲೆಂದರಲ್ಲಿ ಹರಿದು ಬರುತ್ತದೆ. ಮಳೆ ಕಡಿಮೆಯಾಗುತ್ತಿದ್ದಂತೆಯೇ ನದಿಗಳಲ್ಲಿ ನೀರಿನ ಪ್ರಮಾಣವು ಕಡಿಮೆಯಾಗಿ ಬಿಡುತ್ತಿದೆ.

ಇನ್ನು ಮಳೆಗಾಲದಲ್ಲಿ ರಸ್ತೆಗಳು ಕೆಸರುಮಯವಾಗಿ ಓಡಾಡುವುದೇ ಕಷ್ಟವಾಗುತ್ತದೆ. ಇದರ ಜೊತೆಗೆ ಬೆಟ್ಟಗುಡ್ಡ, ಕಂದಕಗಳಲ್ಲಿ ಮನೆ ಮಾಡಿಕೊಂಡಿರುವ ಸ್ಥಳಗಳಿಗೆ ವಾಹನಗಳೇ ತೆರಳುವುದಿಲ್ಲ. ಕೆಲವು ಕಡೆಗಳಲ್ಲಿ ನದಿ ತುಂಬಿ ಹರಿದಾಗ ಸಂಪರ್ಕವೇ ಕಡಿತಗೊಳ್ಳುತ್ತದೆ. ಆಗಾಗ್ಗೆ ಮರಗಳು ಬೀಳುವುದು, ವಿದ್ಯುತ್‌ ಕಂಬಗಳು ಮುರಿಯುವುದು ಹೀಗೆ ಹಲವು ಸಮಸ್ಯೆಗಳಿಂದಾಗಿ ವಿದ್ಯುತ್‌ ಕೈಕೊಡುತ್ತದೆ. ಮಳೆಯಲ್ಲಿಯೇ ಗದ್ದೆ ತೋಟಗಳಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯತೆ. ಹೀಗೆ ಹತ್ತಾರು ಜಂಜಾಟಗಳ ನಡುವೆ ಇಲ್ಲಿನವರ ಬದುಕು ಸಾಗುತ್ತದೆ.

ಇದೆಲ್ಲದರ ನಡುವೆ ಕೊಡಗಿನ ಮಳೆಗಾಲ ಮತ್ತು ಮಳೆಗಾಲದಲ್ಲಿ ಆಚರಿಸಲ್ಪಡುವ ಆಚರಣೆಗಳು, ತಿನಿಸುಗಳು, ಕೃಷಿ ಚಟುವಟಿಕೆ ಎಲ್ಲವೂ ಭಿನ್ನವಾಗಿರುತ್ತವೆ. ಬಹುಶಃ ಇಲ್ಲಿನವರು ಮಳೆಗಾಲದಲ್ಲಿ ಏನೇ ಸಂಕಷ್ಟ ಅನುಭವಿಸಿದರೂ ಅದರಾಚೆಗೆ ಮಳೆಗಾಲವನ್ನು ಧೈರ್ಯವಾಗಿ ಮತ್ತು ಖುಷಿಯಿಂದಲೇ ಎದುರಿಸುತ್ತಾರೆ.

ಇನ್ನೂ ಮಳೆಗಾಲದಲ್ಲಿ ಸುತ್ತಮುತ್ತಲ ಪ್ರದೇಶಗಳಲ್ಲಿ ಸಿಗುವ ಗಿಡಮೂಲಿಕೆಗಳನ್ನು ಬಳಸಿ ಆಹಾರ ಪದಾರ್ಥಗಳನ್ನು ತಯಾರಿಸಿ ಮನೆಮಂದಿಯೆಲ್ಲಾ ಸೇವಿಸುತ್ತಾರೆ. ಈ ನಡುವೆ ಮಳೆಗಾಲದಲ್ಲಿಯೇ ಇಲ್ಲಿ ಭತ್ತದ ಕೃಷಿ ಆರಂಭವಾಗುತ್ತದೆ. ಬೆಳಿಗ್ಗೆಯಿಂದ ರಾತ್ರಿವರೆಗೂ ಮಳೆ ನಡುವೆ ಕೆಸರು ನೀರು ತುಂಬಿದ ಗದ್ದೆಯಲ್ಲಿ ಸೊಂಟ ಬಗ್ಗಿಸಿ ನಾಟಿ ನೆಡುವುದು ಸುಲಭದ ಕೆಲಸವಲ್ಲ. ಅದನ್ನು ಮಾಡಬೇಕಾದರೆ ದೈಹಿಕವಾಗಿ ಶಕ್ತಿಬೇಕು. ಇಂತಹ ಶಕ್ತಿಯನ್ನು ಇಲ್ಲಿ ಸ್ಥಳೀಯ ಆಹಾರಗಳು ನೀಡುತ್ತವೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago