ಕೊಡಗು

ಮಳೆಗಾಲದಲ್ಲಿ ಕೊಡಗು ಜನತೆಯ ಬದುಕು ಹೇಗಿದೆ ಗೊತ್ತಾ.?

ಕೊಡಗು: ಮಳೆಗಾಲ ಎಂದಾಕ್ಷಣ ಕೊಡಗಿನ ಜನರಲ್ಲಿ ನಡುಕ ಹುಟ್ಟುತ್ತದೆ. ತೋಟದ ನಡುವೆ, ನದಿ ತಟದ ಪ್ರದೇಶಗಳಲ್ಲಿ, ಬೆಟ್ಟಗುಡ್ಡಗಳ ತಪ್ಪಲಲ್ಲಿ ಮನೆ ಕಟ್ಟಿಕೊಂಡು ಜೀವನ ನಡೆಸುವವರೆಲ್ಲರೂ ಭಯದಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಂದಿನ ಕಾಲದಲ್ಲಿ ಸುರಿಯುತ್ತಿದ್ದ ಮಳೆಗೂ ಈಗ ಸುರಿಯುವ ಮಳೆಗೂ ಭಾರೀ ವ್ಯತ್ಯಾಸ ಕಾಣುತ್ತಿದೆ. ಮೊದಲೆಲ್ಲಾ ಜಿಟಿ ಜಿಟಿ ಸುರಿಯುತ್ತಾ ಮಳೆ ವೇಗ ಪಡೆದುಕೊಳ್ಳುತ್ತಿತ್ತು. ಜುಲೈ ತಿಂಗಳ ಹೊತ್ತಿಗೆ ಎಲ್ಲೆಂದರಲ್ಲಿ ಅಂತರ್ಜಲಗಳು ಹೆಚ್ಚಾಗಿ ನೀರಾಗಿ ಹರಿಯಲಾರಂಭಿಸುತ್ತಿದ್ದವು. ಇದರಿಂದ ಮಳೆ ಕಡಿಮೆಯಾದರೂ ಜಲ ನೀರು ನದಿಗಳನ್ನು ಸೇರುತ್ತಿದ್ದರಿಂದ ನದಿ ನೀರಿನ ಪ್ರಮಾಣ ಕಡಿಮೆಯಾಗುತ್ತಿರಲಿಲ್ಲ. ಆದರೆ ಈಗ ಒಮ್ಮೆಲೆ ಮಳೆ ಸುರಿದಾಗ ನೀರು ಕೂಡ ಎಲ್ಲೆಂದರಲ್ಲಿ ಹರಿದು ಬರುತ್ತದೆ. ಮಳೆ ಕಡಿಮೆಯಾಗುತ್ತಿದ್ದಂತೆಯೇ ನದಿಗಳಲ್ಲಿ ನೀರಿನ ಪ್ರಮಾಣವು ಕಡಿಮೆಯಾಗಿ ಬಿಡುತ್ತಿದೆ.

ಇನ್ನು ಮಳೆಗಾಲದಲ್ಲಿ ರಸ್ತೆಗಳು ಕೆಸರುಮಯವಾಗಿ ಓಡಾಡುವುದೇ ಕಷ್ಟವಾಗುತ್ತದೆ. ಇದರ ಜೊತೆಗೆ ಬೆಟ್ಟಗುಡ್ಡ, ಕಂದಕಗಳಲ್ಲಿ ಮನೆ ಮಾಡಿಕೊಂಡಿರುವ ಸ್ಥಳಗಳಿಗೆ ವಾಹನಗಳೇ ತೆರಳುವುದಿಲ್ಲ. ಕೆಲವು ಕಡೆಗಳಲ್ಲಿ ನದಿ ತುಂಬಿ ಹರಿದಾಗ ಸಂಪರ್ಕವೇ ಕಡಿತಗೊಳ್ಳುತ್ತದೆ. ಆಗಾಗ್ಗೆ ಮರಗಳು ಬೀಳುವುದು, ವಿದ್ಯುತ್‌ ಕಂಬಗಳು ಮುರಿಯುವುದು ಹೀಗೆ ಹಲವು ಸಮಸ್ಯೆಗಳಿಂದಾಗಿ ವಿದ್ಯುತ್‌ ಕೈಕೊಡುತ್ತದೆ. ಮಳೆಯಲ್ಲಿಯೇ ಗದ್ದೆ ತೋಟಗಳಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯತೆ. ಹೀಗೆ ಹತ್ತಾರು ಜಂಜಾಟಗಳ ನಡುವೆ ಇಲ್ಲಿನವರ ಬದುಕು ಸಾಗುತ್ತದೆ.

ಇದೆಲ್ಲದರ ನಡುವೆ ಕೊಡಗಿನ ಮಳೆಗಾಲ ಮತ್ತು ಮಳೆಗಾಲದಲ್ಲಿ ಆಚರಿಸಲ್ಪಡುವ ಆಚರಣೆಗಳು, ತಿನಿಸುಗಳು, ಕೃಷಿ ಚಟುವಟಿಕೆ ಎಲ್ಲವೂ ಭಿನ್ನವಾಗಿರುತ್ತವೆ. ಬಹುಶಃ ಇಲ್ಲಿನವರು ಮಳೆಗಾಲದಲ್ಲಿ ಏನೇ ಸಂಕಷ್ಟ ಅನುಭವಿಸಿದರೂ ಅದರಾಚೆಗೆ ಮಳೆಗಾಲವನ್ನು ಧೈರ್ಯವಾಗಿ ಮತ್ತು ಖುಷಿಯಿಂದಲೇ ಎದುರಿಸುತ್ತಾರೆ.

ಇನ್ನೂ ಮಳೆಗಾಲದಲ್ಲಿ ಸುತ್ತಮುತ್ತಲ ಪ್ರದೇಶಗಳಲ್ಲಿ ಸಿಗುವ ಗಿಡಮೂಲಿಕೆಗಳನ್ನು ಬಳಸಿ ಆಹಾರ ಪದಾರ್ಥಗಳನ್ನು ತಯಾರಿಸಿ ಮನೆಮಂದಿಯೆಲ್ಲಾ ಸೇವಿಸುತ್ತಾರೆ. ಈ ನಡುವೆ ಮಳೆಗಾಲದಲ್ಲಿಯೇ ಇಲ್ಲಿ ಭತ್ತದ ಕೃಷಿ ಆರಂಭವಾಗುತ್ತದೆ. ಬೆಳಿಗ್ಗೆಯಿಂದ ರಾತ್ರಿವರೆಗೂ ಮಳೆ ನಡುವೆ ಕೆಸರು ನೀರು ತುಂಬಿದ ಗದ್ದೆಯಲ್ಲಿ ಸೊಂಟ ಬಗ್ಗಿಸಿ ನಾಟಿ ನೆಡುವುದು ಸುಲಭದ ಕೆಲಸವಲ್ಲ. ಅದನ್ನು ಮಾಡಬೇಕಾದರೆ ದೈಹಿಕವಾಗಿ ಶಕ್ತಿಬೇಕು. ಇಂತಹ ಶಕ್ತಿಯನ್ನು ಇಲ್ಲಿ ಸ್ಥಳೀಯ ಆಹಾರಗಳು ನೀಡುತ್ತವೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

10 mins ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

19 mins ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

24 mins ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

30 mins ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

10 hours ago