ಕೊಡಗು

ಮಳೆಗಾಲದಲ್ಲಿ ಕೊಡಗು ಜನತೆಯ ಬದುಕು ಹೇಗಿದೆ ಗೊತ್ತಾ.?

ಕೊಡಗು: ಮಳೆಗಾಲ ಎಂದಾಕ್ಷಣ ಕೊಡಗಿನ ಜನರಲ್ಲಿ ನಡುಕ ಹುಟ್ಟುತ್ತದೆ. ತೋಟದ ನಡುವೆ, ನದಿ ತಟದ ಪ್ರದೇಶಗಳಲ್ಲಿ, ಬೆಟ್ಟಗುಡ್ಡಗಳ ತಪ್ಪಲಲ್ಲಿ ಮನೆ ಕಟ್ಟಿಕೊಂಡು ಜೀವನ ನಡೆಸುವವರೆಲ್ಲರೂ ಭಯದಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಂದಿನ ಕಾಲದಲ್ಲಿ ಸುರಿಯುತ್ತಿದ್ದ ಮಳೆಗೂ ಈಗ ಸುರಿಯುವ ಮಳೆಗೂ ಭಾರೀ ವ್ಯತ್ಯಾಸ ಕಾಣುತ್ತಿದೆ. ಮೊದಲೆಲ್ಲಾ ಜಿಟಿ ಜಿಟಿ ಸುರಿಯುತ್ತಾ ಮಳೆ ವೇಗ ಪಡೆದುಕೊಳ್ಳುತ್ತಿತ್ತು. ಜುಲೈ ತಿಂಗಳ ಹೊತ್ತಿಗೆ ಎಲ್ಲೆಂದರಲ್ಲಿ ಅಂತರ್ಜಲಗಳು ಹೆಚ್ಚಾಗಿ ನೀರಾಗಿ ಹರಿಯಲಾರಂಭಿಸುತ್ತಿದ್ದವು. ಇದರಿಂದ ಮಳೆ ಕಡಿಮೆಯಾದರೂ ಜಲ ನೀರು ನದಿಗಳನ್ನು ಸೇರುತ್ತಿದ್ದರಿಂದ ನದಿ ನೀರಿನ ಪ್ರಮಾಣ ಕಡಿಮೆಯಾಗುತ್ತಿರಲಿಲ್ಲ. ಆದರೆ ಈಗ ಒಮ್ಮೆಲೆ ಮಳೆ ಸುರಿದಾಗ ನೀರು ಕೂಡ ಎಲ್ಲೆಂದರಲ್ಲಿ ಹರಿದು ಬರುತ್ತದೆ. ಮಳೆ ಕಡಿಮೆಯಾಗುತ್ತಿದ್ದಂತೆಯೇ ನದಿಗಳಲ್ಲಿ ನೀರಿನ ಪ್ರಮಾಣವು ಕಡಿಮೆಯಾಗಿ ಬಿಡುತ್ತಿದೆ.

ಇನ್ನು ಮಳೆಗಾಲದಲ್ಲಿ ರಸ್ತೆಗಳು ಕೆಸರುಮಯವಾಗಿ ಓಡಾಡುವುದೇ ಕಷ್ಟವಾಗುತ್ತದೆ. ಇದರ ಜೊತೆಗೆ ಬೆಟ್ಟಗುಡ್ಡ, ಕಂದಕಗಳಲ್ಲಿ ಮನೆ ಮಾಡಿಕೊಂಡಿರುವ ಸ್ಥಳಗಳಿಗೆ ವಾಹನಗಳೇ ತೆರಳುವುದಿಲ್ಲ. ಕೆಲವು ಕಡೆಗಳಲ್ಲಿ ನದಿ ತುಂಬಿ ಹರಿದಾಗ ಸಂಪರ್ಕವೇ ಕಡಿತಗೊಳ್ಳುತ್ತದೆ. ಆಗಾಗ್ಗೆ ಮರಗಳು ಬೀಳುವುದು, ವಿದ್ಯುತ್‌ ಕಂಬಗಳು ಮುರಿಯುವುದು ಹೀಗೆ ಹಲವು ಸಮಸ್ಯೆಗಳಿಂದಾಗಿ ವಿದ್ಯುತ್‌ ಕೈಕೊಡುತ್ತದೆ. ಮಳೆಯಲ್ಲಿಯೇ ಗದ್ದೆ ತೋಟಗಳಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯತೆ. ಹೀಗೆ ಹತ್ತಾರು ಜಂಜಾಟಗಳ ನಡುವೆ ಇಲ್ಲಿನವರ ಬದುಕು ಸಾಗುತ್ತದೆ.

ಇದೆಲ್ಲದರ ನಡುವೆ ಕೊಡಗಿನ ಮಳೆಗಾಲ ಮತ್ತು ಮಳೆಗಾಲದಲ್ಲಿ ಆಚರಿಸಲ್ಪಡುವ ಆಚರಣೆಗಳು, ತಿನಿಸುಗಳು, ಕೃಷಿ ಚಟುವಟಿಕೆ ಎಲ್ಲವೂ ಭಿನ್ನವಾಗಿರುತ್ತವೆ. ಬಹುಶಃ ಇಲ್ಲಿನವರು ಮಳೆಗಾಲದಲ್ಲಿ ಏನೇ ಸಂಕಷ್ಟ ಅನುಭವಿಸಿದರೂ ಅದರಾಚೆಗೆ ಮಳೆಗಾಲವನ್ನು ಧೈರ್ಯವಾಗಿ ಮತ್ತು ಖುಷಿಯಿಂದಲೇ ಎದುರಿಸುತ್ತಾರೆ.

ಇನ್ನೂ ಮಳೆಗಾಲದಲ್ಲಿ ಸುತ್ತಮುತ್ತಲ ಪ್ರದೇಶಗಳಲ್ಲಿ ಸಿಗುವ ಗಿಡಮೂಲಿಕೆಗಳನ್ನು ಬಳಸಿ ಆಹಾರ ಪದಾರ್ಥಗಳನ್ನು ತಯಾರಿಸಿ ಮನೆಮಂದಿಯೆಲ್ಲಾ ಸೇವಿಸುತ್ತಾರೆ. ಈ ನಡುವೆ ಮಳೆಗಾಲದಲ್ಲಿಯೇ ಇಲ್ಲಿ ಭತ್ತದ ಕೃಷಿ ಆರಂಭವಾಗುತ್ತದೆ. ಬೆಳಿಗ್ಗೆಯಿಂದ ರಾತ್ರಿವರೆಗೂ ಮಳೆ ನಡುವೆ ಕೆಸರು ನೀರು ತುಂಬಿದ ಗದ್ದೆಯಲ್ಲಿ ಸೊಂಟ ಬಗ್ಗಿಸಿ ನಾಟಿ ನೆಡುವುದು ಸುಲಭದ ಕೆಲಸವಲ್ಲ. ಅದನ್ನು ಮಾಡಬೇಕಾದರೆ ದೈಹಿಕವಾಗಿ ಶಕ್ತಿಬೇಕು. ಇಂತಹ ಶಕ್ತಿಯನ್ನು ಇಲ್ಲಿ ಸ್ಥಳೀಯ ಆಹಾರಗಳು ನೀಡುತ್ತವೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

37 mins ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

40 mins ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

42 mins ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

45 mins ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

10 hours ago