ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯ ಬಹುತೇಕ ಭರ್ತಿಯಾಗಿದೆ.
2859 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಈಗಾಗಲೇ 2849 ಅಡಿಗಳಷ್ಟು ನೀರು ಸಂಗ್ರಹವಾಗಿದ್ದು, ಜಲಾಶಯದ ಭದ್ರತೆಯ ದೃಷ್ಟಿಯಿಂದ ಜಲಾಶಯ ಭರ್ತಿಯಾಗಲು 10 ಅಡಿ ಬಾಕಿಯಿರುವಾಗಲೇ ನದಿಗೆ ನೀರನ್ನು ಹರಿಸಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ನದಿ-ತೊರೆಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿಯುತ್ತಿದೆ. ಇದರಿಂದ ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ಸದ್ಯ 2394 ಕ್ಯೂಸೆಕ್ಸ್ ಒಳಹರಿವಿದೆ. 8 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಈಗಾಗಲೇ 6 ಟಿಎಂಸಿಯಷ್ಟು ನೀರು ಸಂಗ್ರಹವಾಗಿದ್ದು, ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿಯೂ ಮಳೆ ಉತ್ತಮವಾಗಿರುವ ಮುನ್ಸೂಚನೆ ಇರುವುದರಿಂದ ನದಿಗೆ ಹರಿಸುತ್ತಿದ್ದ 200 ಕ್ಯೂಸೆಕ್ಸ್ ನೀರಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ.
ಹಾರಂಗಿ ಜಲಾಶಯದ ಸಂಗ್ರಹ ಸಾಮರ್ಥ್ಯ 8 ಟಿಎಂಸಿ ಆಗಿದ್ದು, ಪ್ರತಿ ಸಲ 7 ಟಿಎಂಸಿ ನೀರನ್ನು ಮಾತ್ರ ಇರಿಸಿಕೊಂಡು ಉಳಿದ ನೀರನ್ನು ಹೊರಬಿಡಲಾಗುತ್ತದೆ. ಈ ಬಾರಿ ಜಿಲ್ಲೆಯಲ್ಲಿ ಮೇ ತಿಂಗಳಿನಿಂದಲೂ ಉತ್ತಮ ಮಳೆಯಾಗುತ್ತಿದೆ. ಜೂನ್ ಅಂತ್ಯದಲ್ಲಿ ಇರಂತರ ಮಳೆಯಾಗುತ್ತಿದ್ದು, ಈ ತಿಂಗಳಿಡೀ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಜಲಾಶಯಕ್ಕೆ 2400 ಕ್ಯೂಸೆಕ್ಸ್ ಒಳಹರಿವಿದ್ದು, ಮುಂದಿನ ದಿನಗಳಲ್ಲಿ ಇದು ಇನ್ನು ಹೆಚ್ಚಾಗುತ್ತಾ ಹೊಗುವ ನಿರೀಕ್ಷೆಯಿದೆ. ಹೀಗಾದರೇ ಸದ್ಯ 6 ಟಿಎಂಸಿಯಷ್ಟಿರುವ ನೀರು ಇನ್ನೆರಡು ಅಥವಾ ಮೂರು ದಿನಗಳಲ್ಲಿ 7 ಟಿಎಂಸಿ ದಾಟಲಿದೆ. ಜಲಾಶಯದಿಂದ ಒಮ್ಮೆಲೆ ಹೆಚ್ಚಿನ ಪ್ರಮಾಣದ ನೀರು ಹೊರಬಿಡುವುದನ್ನು ತಪ್ಪಿಸುವ ಸಲುವಾಗಿ ಜಲಾಶಯ ಭರ್ತಿಗೆ ಇನ್ನೂ 10 ಅಡಿಗಳು ಬಾಕಿಯಿರುವಾಗಲೇ ನದಿಗೆ ನೀರು ಹರಿಸಲಾಗುತ್ತಿದೆ ಎಂದು ಜಲಾಶಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹಾರಂಗಿ ಜಲಾಶಯದಿಂದ ಒಮ್ಮೆಲೇ ಹೆಚ್ಚಿನ ಪ್ರಮಾಣದ ನೀರು ಹರಿಸಿದರೆ ಈ ನೀರು ಕಾವೇರಿಗೆ ಸೇರುವಲ್ಲಿ ಒತ್ತಡ ಉಂಟಾಗಿ ಕುಶಾಲನಗರದ ಹಲವು ಬಡಾವಣೆಗಳು ಮುಳುಗಡೆಯಾಗುತ್ತವೆ. ಪ್ರವಾಹದಿಂದ ಸಾವಿರಾರು ಮಂದಿ ಸಂಕಷ್ಟಕ್ಕೆ ಸಿಲುಕುತ್ತಾರೆ. ಹೀಗಾಗಿ ಕಳೆದೆರಡು ವರ್ಷಗಳಿಂದ ಹಾರಂಗಿ ಜಲಾಶಯ ತುಂಬಲು ಇನ್ನೂ ಕೆಲ ಅಡಿಗಳು ಬಾಕಿ ಇರುವಾಗಲೇ ಒಳಹರಿವಿನ ಆಧಾರದಲ್ಲಿ ನೀರನ್ನು ನದಿಗೆ ಹರಿಸಲಾಗುತ್ತದೆ.
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…