ಕೊಡಗು

ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆ: ಹಾರಂಗಿ ಜಲಾಶಯ ಬಹುತೇಕ ಭರ್ತಿ

ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯ ಬಹುತೇಕ ಭರ್ತಿಯಾಗಿದೆ.

2859 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಈಗಾಗಲೇ 2849 ಅಡಿಗಳಷ್ಟು ನೀರು ಸಂಗ್ರಹವಾಗಿದ್ದು, ಜಲಾಶಯದ ಭದ್ರತೆಯ ದೃಷ್ಟಿಯಿಂದ ಜಲಾಶಯ ಭರ್ತಿಯಾಗಲು 10 ಅಡಿ ಬಾಕಿಯಿರುವಾಗಲೇ ನದಿಗೆ ನೀರನ್ನು ಹರಿಸಲಾಗಿದೆ.

ಕೊಡಗು ಜಿಲ್ಲೆಯಾದ್ಯಂತ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ನದಿ-ತೊರೆಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿಯುತ್ತಿದೆ. ಇದರಿಂದ ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ಸದ್ಯ 2394 ಕ್ಯೂಸೆಕ್ಸ್‌ ಒಳಹರಿವಿದೆ. 8 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಈಗಾಗಲೇ 6 ಟಿಎಂಸಿಯಷ್ಟು ನೀರು ಸಂಗ್ರಹವಾಗಿದ್ದು, ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿಯೂ ಮಳೆ ಉತ್ತಮವಾಗಿರುವ ಮುನ್ಸೂಚನೆ ಇರುವುದರಿಂದ ನದಿಗೆ ಹರಿಸುತ್ತಿದ್ದ 200 ಕ್ಯೂಸೆಕ್ಸ್‌ ನೀರಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ.

ಹಾರಂಗಿ ಜಲಾಶಯದ ಸಂಗ್ರಹ ಸಾಮರ್ಥ್ಯ 8 ಟಿಎಂಸಿ ಆಗಿದ್ದು, ಪ್ರತಿ ಸಲ 7 ಟಿಎಂಸಿ ನೀರನ್ನು ಮಾತ್ರ ಇರಿಸಿಕೊಂಡು ಉಳಿದ ನೀರನ್ನು ಹೊರಬಿಡಲಾಗುತ್ತದೆ. ಈ ಬಾರಿ ಜಿಲ್ಲೆಯಲ್ಲಿ ಮೇ ತಿಂಗಳಿನಿಂದಲೂ ಉತ್ತಮ ಮಳೆಯಾಗುತ್ತಿದೆ. ಜೂನ್‌ ಅಂತ್ಯದಲ್ಲಿ ಇರಂತರ ಮಳೆಯಾಗುತ್ತಿದ್ದು, ಈ ತಿಂಗಳಿಡೀ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಜಲಾಶಯಕ್ಕೆ 2400 ಕ್ಯೂಸೆಕ್ಸ್‌ ಒಳಹರಿವಿದ್ದು, ಮುಂದಿನ ದಿನಗಳಲ್ಲಿ ಇದು ಇನ್ನು ಹೆಚ್ಚಾಗುತ್ತಾ ಹೊಗುವ ನಿರೀಕ್ಷೆಯಿದೆ. ಹೀಗಾದರೇ ಸದ್ಯ 6 ಟಿಎಂಸಿಯಷ್ಟಿರುವ ನೀರು ಇನ್ನೆರಡು ಅಥವಾ ಮೂರು ದಿನಗಳಲ್ಲಿ 7 ಟಿಎಂಸಿ ದಾಟಲಿದೆ. ಜಲಾಶಯದಿಂದ ಒಮ್ಮೆಲೆ ಹೆಚ್ಚಿನ ಪ್ರಮಾಣದ ನೀರು ಹೊರಬಿಡುವುದನ್ನು ತಪ್ಪಿಸುವ ಸಲುವಾಗಿ ಜಲಾಶಯ ಭರ್ತಿಗೆ ಇನ್ನೂ 10 ಅಡಿಗಳು ಬಾಕಿಯಿರುವಾಗಲೇ ನದಿಗೆ ನೀರು ಹರಿಸಲಾಗುತ್ತಿದೆ ಎಂದು ಜಲಾಶಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಾರಂಗಿ ಜಲಾಶಯದಿಂದ ಒಮ್ಮೆಲೇ ಹೆಚ್ಚಿನ ಪ್ರಮಾಣದ ನೀರು ಹರಿಸಿದರೆ ಈ ನೀರು ಕಾವೇರಿಗೆ ಸೇರುವಲ್ಲಿ ಒತ್ತಡ ಉಂಟಾಗಿ ಕುಶಾಲನಗರದ ಹಲವು ಬಡಾವಣೆಗಳು ಮುಳುಗಡೆಯಾಗುತ್ತವೆ. ಪ್ರವಾಹದಿಂದ ಸಾವಿರಾರು ಮಂದಿ ಸಂಕಷ್ಟಕ್ಕೆ ಸಿಲುಕುತ್ತಾರೆ. ಹೀಗಾಗಿ ಕಳೆದೆರಡು ವರ್ಷಗಳಿಂದ ಹಾರಂಗಿ ಜಲಾಶಯ ತುಂಬಲು ಇನ್ನೂ ಕೆಲ ಅಡಿಗಳು ಬಾಕಿ ಇರುವಾಗಲೇ ಒಳಹರಿವಿನ ಆಧಾರದಲ್ಲಿ ನೀರನ್ನು ನದಿಗೆ ಹರಿಸಲಾಗುತ್ತದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

6 mins ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

13 mins ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

18 mins ago

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

23 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

23 hours ago