ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎಡಬಿಡದೇ ಭಾರೀ ಮಳೆ ಸುರಿಯುತ್ತಿದ್ದು, ಇಲ್ಲಿನ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಭಾರೀ ಪ್ರಮಾಣದ ನೀರು ಜಲಾಶಯಕ್ಕೆ ಹರಿದು ಬರುತ್ತಿರುವುದರಿಂದ ಅಧಿಕಾರಿಗಳು ಪ್ರವಾಹದ ಮುನ್ಸೂಚನೆ ನೀಡಿದ್ದಾರೆ.
ಇಂದು ಬೆಳಿಗ್ಗೆ 8 ಗಂಟೆಯಲ್ಲಿ 4,691 ಕ್ಯೂಸೆಕ್ಸ್ ಇದ್ದ ಒಳಹರಿವು 11 ಗಂಟೆ ಹೊತ್ತಿಗೆ 7720 ಕ್ಯೂಸೆಕ್ಸ್ಗೆ ಏರಿಕೆಯಾಗಿದೆ. ಕ್ಷಣದಿಂದ ಕ್ಷಣಕ್ಕೆ ನೀರಿನ ಒಳಹರಿವು ಏರಿಕೆಯಾಗುತ್ತಿರುವುದರಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಡಲಾಗುತ್ತಿದೆ.
ಇನ್ನಷ್ಟು ಭಾರೀ ಮಳೆ ಬೀಳುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾಗಿ, ಒಳಹರಿವು ಇನ್ನಷ್ಟು ಹೆಚ್ಚಾಗುವ ಸಂಭವ ಇರುವುದರಿಂದ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ಮತ್ತು ಹಾರಂಗಿ ನದಿ ದಂಡೆಯಲ್ಲಿ ವಾಸ ಮಾಡುವವರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಜಲಾಶಯದ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…