ಕೊಡಗು: ಕೊಡಗು ಜಿಲ್ಲೆಯಲ್ಲಿ ಭಾರೀ ಗಾಳಿ, ಮಳೆಯಾದ ಪರಿಣಾಮ ಈ ವರ್ಷ ಚೆಸ್ಕಾಂಗೆ ಭಾರೀ ನಷ್ಟ ಉಂಟಾಗಿದೆ.
ಕಳೆದ ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದ್ದು, ಕಾವೇರಿ ನದಿ ಪ್ರವಾಹದ ರೂಪ ಪಡೆದಿತ್ತು.
ಮಳೆಗಿಂತ ಮುಖ್ಯವಾಗಿ ಭೀಕರ ಗಾಳಿ ಬೀಸಿದ್ದ ಪರಿಣಾಮ ಸಾವಿರಾರು ಮರ, ವಿದ್ಯುತ್ ಕಂಬಗಳು ಧರೆಗುರುಳಿದ್ದವು. ಮರಗಳು ವಿದ್ಯುತ್ ಕಂಬಗಳ ಮೇಲೆ ಉರುಳಿ ಬಿದ್ದ ಪರಿಣಾಮ ಜಿಲ್ಲೆಯಲ್ಲಿ ಸುಮಾರು 3077 ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದವು.
ಇದರ ಜೊತೆಗೆ 150 ಟ್ರಾನ್ಸ್ಫಾರ್ಮರ್ಗಳು ಹಾಳಾಗಿವೆ ಎಂದು ಸ್ವತಃ ಚೆಸ್ಕಾಂ ಅಧಿಕಾರಿಗಳೇ ಮಾಹಿತಿ ನೀಡಿದ್ದು, ಇದರಿಂದ ಇಲಾಖೆಗೆ 4.83 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಕೊಡಗು ಜಿಲ್ಲೆಯಲ್ಲಿ ಈ ತಿಂಗಳು ಕೂಡ ಮಳೆ ಮುಂದುವರಿಯುವ ಎಲ್ಲಾ ಸಾಧ್ಯತೆಗಳಿದ್ದು, ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳು ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ.
ಇನ್ನು ಈ ವರ್ಷಕ್ಕೆ ನೋಡಿದರೆ, ಕಳೆದ ವರ್ಷ ವಿದ್ಯುತ್ ಇಲಾಖೆಗೆ ಹೆಚ್ಚೇನೋ ನಷ್ಟವಾಗಿರಲಿಲ್ಲ. ಆದರೆ ಈ ಬಾರಿ ಜುಲೈ ಹಾಗೂ ಆಗಸ್ಟ್ನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಅಪಾರ ನಷ್ಟವಾಗಿದೆ.
ಇದರ ಜೊತೆ ಜೊತೆಗೆ ಬೆಟ್ಟ-ಗುಡ್ಡಗಳಲ್ಲಿ ವಾಸಿಸುತ್ತಿರುವ ಜನರಿಗೆ ಕಡಿತವಾಗಿರುವ ವಿದ್ಯುತ್ ಸಂಪರ್ಕವನ್ನು ಸರಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಕೊಡಗು ಜಿಲ್ಲೆ ಸದ್ಯದ ಮಟ್ಟಿಗೆ ಸಹಜ ಸ್ಥಿತಿಯಲ್ಲಿದೆ.
ಒಂದು ವೇಳೆ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಈ ತಿಂಗಳು ಕೂಡ ಮಳೆ ಮುಂದುವರಿದರೆ, ಮತ್ತೆ ಅದೇ ಸ್ಥಿತಿ ಬರಲಿದೆ ಎನ್ನಲಾಗಿದ್ದು, ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…