ಕೊಡಗು

ಕೊಡಗು ಜಿಲ್ಲೆಯಲ್ಲಿ ಮತ್ತೆ ಮುಂದುವರಿದ ಮಳೆ: ಮಡಿಕೇರಿಯಲ್ಲಿ ಮನೆ ಕುಸಿತ

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಮತ್ತೆ ತನ್ನ ಆರ್ಭಟ ಮುಂದುವರಿಸಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ ಮನೆ ಗೋಡೆ ಕುಸಿತ ಕಂಡಿದೆ.

ಹೌದು ಕೊಡಗು ಜಿಲ್ಲೆಯಲ್ಲಿ ಮಳೆ ನಿಂತೇ ಹೋಯಿತೇನೋ ಎಂದು ಜನತೆ ಖುಷಿಪಡುವಷ್ಟರಲ್ಲಿ ಇಂದು ಮತ್ತೆ ವರುಣ ತನ್ನ ಆರ್ಭಟ ಶುರು ಮಾಡಿದ್ದಾರೆ.

ಭಾರೀ ಮಳೆಯಿಂದ ಕೊಡಗು ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳು ಕೂಡ ಸಂಪೂರ್ಣ ಜಲಾವೃತವಾಗಿದ್ದು, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ.

ಇನ್ನೂ ಮಡಿಕೇರಿ ತಾಲ್ಲೂಕಿನಲ್ಲಿ ಭಾರೀ ಮಳೆಯಿಂದ ಮನೆಯ ಗೋಡೆ ಕುಸಿತವಾಗಿದ್ದು, ಬೇಂಗೂರು ಗ್ರಾಮದ ಲಿಂಗಪ್ಪ ಪೂಜಾರಿ ಎಂಬುವವರಿಗೆ ಸೇರಿದ ಮನೆ ಗೋಡೆ ಕುಸಿತವಾಗಿದೆ.

ಮನೆ ಗೋಡೆ ಕುಸಿತದಿಂದ ಕಂಗಾಲಾಗಿರುವ ಲಿಂಗಪ್ಪ ಪೂಜಾರಿ, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದು, ಸ್ಥಳಕ್ಕೆ ಬಾಋದ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ಕೊಟ್ಟಿಲ್ಲ: ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಸಿಎಂ ಬದಲಾವಣೆ…

1 hour ago

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ…

2 hours ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

2 hours ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

2 hours ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

3 hours ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

3 hours ago