ಕೊಡಗು: ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಮಳೆಗೆ ಮನೆಯ ಗೋಡೆ ಕುಸಿತ ಕಂಡಿದೆ.
ಕೊಡಗು ಜಿಲ್ಲೆಯಾದ್ಯಂತ ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಪರಿಣಾಮ ಬೃಹತ್ ಗಾತ್ರದ ಮರ ಹಾಗೂ ಹಲವು ವಿದ್ಯುತ್ ಕಂಬಗಳು ಧರೆಗುರುಳಿವೆ. ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಿಂಭಾಗದಲ್ಲಿ ಬೃಹತ್ ಗಾತ್ರದ ಮರ ಉರುಳಿ ರಸ್ತೆಗೆ ಬಿದ್ದಿದೆ.. ಇದರಿಂದಾಗಿ ಮಡಿಕೇರಿ ಹಾಗೂ ಗಾಳಿಬೀಡು ನಡುವಿನ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆ ಸಂಪರ್ಕ ಸ್ಥಗಿತಗೊಂಡಿದ್ದು, ವಾಹನ ಸವಾರರು ಹಾಗೂ ಜನರ ಓಡಾಟಕ್ಕೆ ಅವಕಾಶವಿಲ್ಲದೇ ಪರದಾಡುವ ಆಗಿದೆ.
ಭಾರೀ ಮಳೆಗೆ ವಿದ್ಯುತ್ ಕಂಬಗಳು ಮುರಿದು ಬಿದ್ದ ಪರಿಣಾಮ ಈ ಭಾಗದಲ್ಲಿ ಕಳೆದ ಎರಡು ಗಂಟೆಯಿಂದ ವಿದ್ಯುತ್ ಸ್ಥಗಿತಗೊಂಡಿದೆ. ಮರ ಹಾಗೂ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದರಿಂದ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಕೆಇಬಿ ಅಧಿಕಾರಿಗಳು ದೌಡಾಯಿಸಿ ಮರ ತೆರವುಗೊಳಿಸಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯಾದ್ಯಂತ ಒಂದೇ ದಿನದಲ್ಲಿ ಹತ್ತಾರು ಮನೆಗಳು ಧರೆಗುರುಳಿವೆ. ಸೋಮವಾರಪೇಟೆ ಹಾಗೂ ಮಡಿಕೇರಿ ತಾಲ್ಲೂಕಿನಾದ್ಯಂತ ಭಾರೀ ಗಾಳಿ ಮಳೆ ಸುರಿಯುತ್ತಿದ್ದು, ಸೋಮವಾರಪೇಟೆ ತಾಲ್ಲೂಕಿನ ಹಲವೆಡೆ ಮನೆಯ ಗೋಡೆ ಕುಸಿತಗೊಂಡಿದೆ.
ಮಳೆಯಿಂದ ಮನೆ ಹಾನಿಯಾದ ಸ್ಥಳಗಳಿಗೆ ಆಯಾಯಾ ತಾಲ್ಲೂಕುಗಳ ತಹಶೀಲ್ದಾರ್ಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಗದೊಂದೆಡೆ ಮರದ ಕೊಂಬೆ ಬಿದ್ದು ಆರು ಕಾರುಗಳಿಗೆ ಹಾನಿಯಾಗಿದೆ.
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…
ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ…
ಮೈಸೂರು: ಮಿರರ್ ರಿಫ್ಲೆಕ್ಷನ್ ಯಶಸ್ವಿಯಾಗಿದೆ. ಆದರೆ ಇದೇ ಪರಿಹಾರವಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್…