ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಪ್ರವೇಶ ನಿಷೇಧಿಸಲಾಗಿದೆ.
ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿನ್ನೆಯಿಂದ ಮಳೆಯ ಆರ್ಭಟ ಜೋರಾಗಿದ್ದು, ರಸ್ತೆಯಲ್ಲಿ ಮಳೆ ನೀರು ನದಿಯಂತೆ ಹರಿಯುತ್ತಿದೆ. ಭಾರೀ ಮಳೆಯಿಂದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಜನರು ಕತ್ತಲಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನು ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧಿಸಲಾಗಿದೆ.
ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಗುಡ್ಡ ಕುಸಿಯುವ ಆತಂಕ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದುಬಾರೆ, ಹಾರಂಗಿ ಸಾಕಾನೆ ಶಿಬಿರಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಇನ್ನು ಕೊಡಗಿನಲ್ಲಿ ನಾಳೆಯೂ ಕೂಡ ರೆಡ್ ಅಲರ್ಟ್ ಇರಲಿದ್ದು, ಜನತೆ ಭಾರೀ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಭಾರೀ ಮಳೆಯಿಂದ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ಬಳಿ ಯಾರೂ ಕೂಡ ತೆರಳದಂತೆ ಕಟ್ಟೆಚ್ಚರ ವಹಿಸಲಾಗಿದೆ.
ಇನ್ನು ಭಾರೀ ಮಳೆಯಾಗುತ್ತಿರುವ ಪರಿಣಾಮ ಕೊಡಗಿನ ಪ್ರವಾಸಿ ತಾಣಗಳಿಗೆ ಯಾರು ಕೂಡ ಭೇಟಿ ನೀಡಬಾರದು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…