ಕೊಡಗು

ಕೊಡಗಿನಲ್ಲಿ ಭಾರೀ ಮಳೆ: ಮುಂದಿನ 2 ದಿನಗಳ ಕಾಲ ರೆಡ್‌ ಅಲರ್ಟ್‌

ಕೊಡಗು: ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಕೊಡಗಿನಲ್ಲಿ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ  ಮುಂದಿನ ಎರಡು ದಿನಗಳ ಕಾಲ ಕೊಡಗಿನಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕಳೆದ ಎರಡು ದಿನಗಳಿಂದ ಕೊಡಗಿನಲ್ಲಿ ಮಳೆ ಕೊಂಚ ಬಿಡುವು ಕೊಟ್ಟಿತ್ತು. ಮಳೆ ನಿಂತಿದ್ದ ಪರಿಣಾಮ ಜನತೆ ಕೊಂಚ ನಿರಾಳರಾಗಿದ್ದರು. ಆದರೆ ಇಂದು ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಧಾರಾಕಾರ ಮಳೆಗೆ ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದ್ದು, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ.

ಧಾರಾಕಾರ ಮಳೆಯಿಂದ ಜಿಲ್ಲೆಯಾದ್ಯಂತ ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದು, ಜನತೆ ಕತ್ತಲಿನಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಕೊಡಗು ಜಿಲ್ಲೆಯಲ್ಲಿ ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೊಡಗು ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ರೆಡ್‌ ಅಲರ್ಟ್‌ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಕೊಡಗಿನಾದ್ಯಂತ ಎರಡು ದಿನಗಳ ಕಾಲ ಶಾಲೆಗಳಿಗೂ ಕೂಡ ರಜೆ ನೀಡುವ ಸಾಧ್ಯತೆಯಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇನ್ನೂ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಭಾರತೀಯ ಕರೆನ್ಸಿಗೆ ಐತಿಹಾಸಿಕ ಪೆಟ್ಟು: ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ

ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ…

12 mins ago

ಮೈಸೂರಿನಲ್ಲಿ ಹೊಸತೊಡಕು ಸಂಭ್ರಮ: ಮಾಂಸದಂಗಡಿಯಲ್ಲಿ ಜನವೋ ಜನ

ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…

56 mins ago

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ…

1 hour ago

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಸ

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ…

2 hours ago

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

5 hours ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

5 hours ago