ಕೊಡಗು

ಕೊಡಗು ಜಿಲ್ಲೆಯಲ್ಲಿ ಹೆಚ್ಚಾದ ಮಳೆಯ ಆರ್ಭಟ; 24 ಗಂಟೆಯಲ್ಲಿ 92 ಮಿ.ಮೀ ಮಳೆ

ಕೊಡಗು: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ 24 ಗಂಟೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 92.22 ಮಿ.ಮೀ ಮಳೆಯಾಗಿದ್ದು, ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಜಿಲ್ಲೆಯಲ್ಲಿ ಕಳೆದ ವರ್ಷ ಇದೇ ದಿನ 3.91ಮಿ.ಮೀ ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸುರಿದ ಮಳೆ 736.67 ಮಿ.ಮೀ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 238.53 ಮಿ.ಮೀ ಮಳೆಯಾಗಿತ್ತು ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಇನ್ನೂ ಮಡಿಕೇರಿ ತಾಲ್ಲೂಕಿನಲ್ಲಿ ಸರಾಸರಿ ಮಳೆ 160.07 ಮಿ.ಮೀ ಮಳೆಯಾಗಿದ್ದು, ಜನವರಿಯಿಂದ ಇಲ್ಲಿಯವರೆಗಿನ ಮಳೆ 1083.85 ಮಿ.ಮೀ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 417.25 ಮಿ.ಮೀ ಮಳೆಯಾಗಿತ್ತು. ಕೊಡಗಿನಲ್ಲಿ ಮಳೆ ಸುರಿಯುತ್ತಿರುವ ಪರಿಣಾಮ ಕಾವೇರಿ ನದಿ ತುಂಬಿ ಹರಿಯುತ್ತಿದೆ.

ವಿರಾಜಪೇಟೆ ತಾಲ್ಲೂಕಿನಲ್ಲಿ ಸರಾಸರಿ ಮಳೆ 103.50 ಮಿ.ಮೀ ಮಳೆ ಆಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 726.45 ಮಿ.ಮೀ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 169.41 ಮಿ.ಮೀ ಮಳೆಯಾಗಿತ್ತು. ಭಾರೀ ಮಳೆಯ ಪರಿಣಾಮ ಭಾಗಮಂಡಲ ಜಲಾವೃತವಾಗಿದೆ.

ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ರಸ್ತೆಗಳೆಲ್ಲಾ ಸಂಪೂರ್ಣ ಜಲಾವೃತವಾಗಿದ್ದು, ಚಿಕ್ಕ ಚಿಕ್ಕ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.

ಮಳೆ ಹೀಗೇಯೇ ಮುಂದುವರಿದರೆ ನಾಳೆಯೂ ಕೂಡ ಶಾಲಾ-ಕಾಲೇಜುಗಳಿಗೆ ರಜೆ ನೀಡೋದು ಪಕ್ಕಾ ಆಗಿದೆ. ಮಳೆಯ ಪ್ರಮಾಣ ನೋಡಿಕೊಂಡು ನಾಳೆ ಬೆಳಿಗ್ಗೆ ಕೊಡಗು ಜಿಲ್ಲಾಧಿಕಾರಿ ರಜೆಯ ಬಗ್ಗೆ ನಿರ್ಧರಿಸಲಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

4 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

5 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

5 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

6 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

6 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

9 hours ago