ಕೊಡಗು/ಮಡಿಕೇರಿ: ಕರ್ನಾಟಕದ ಕಾಶ್ಮೀರಾ ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿದೆ. ನಗರದಲ್ಲಿ ಬುಧವಾರ ರಾತ್ರಿಯಿಂದಲೂ ಎಡೆಬಿಡದೆ ಜೋರಾಗಿ ಸುರಿಯುತ್ತಿರುವ ಮಳೆ. ಇಂದು (ಜೂನ್.27) ತನ್ನ ಆರ್ಭಟವನ್ನು ಮುಂದುವರೆಸಿದೆ. ಬಿರುಗಾಳಿ ಸಹಿತ ಭಾರೀ ಮಳೆ ಬರುತ್ತಿದೆ.
ಮಳೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆ ಜಿಲ್ಲೆಯ ಪ್ರಾಥಾಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಇತ್ತ ಜೋರು ಮಳೆಯಿಂದಾಗಿ ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ವಿಪರೀತ ಮಳೆಯಿಂದಾಗಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.
ಹೆಚ್ಚಿನ ಮಳೆಯಿಂದಾಗಿ ಪ್ರವಾಹದ ಭೀತಿ ಉಂಟಾಗಿದ್ದು, ನದಿಪಾತ್ರದ ನಿವಾಸಿಗಳ ರಕ್ಷಣೆಗೆ ಜಿಲ್ಲಾಡಳಿತ ಅಗತ್ಯ ಮುನ್ನಚ್ಚರಿಕಾ ಕ್ರಮ ಕೈಗೊಂಡಿದೆ.
ಜಿಲ್ಲೆಯ ಹಲವೆಡೆ ಮಣ್ಣು ಕುಸಿತ, ತೀವ್ರ ಪ್ರವಾಹದ ಮುನ್ಸೂಚನೆ ಕಂಡುಬಂದಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಸಕಲ ಸಿದ್ದತೆಗಳೊಂದಿಗೆ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…