ಕೊಡಗು

ಕೊಡಗು: ನಾಪೋಕ್ಲುವಿನಲ್ಲಿ ಸಿಡಿಲು ಸಹಿತ ಧಾರಾಕಾರ ಮಳೆ: ಕಾಫಿ ಬೆಳೆಗಾರರ ಸಂತಸ

ಕೊಡಗು: ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲುಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಇಂದು ಸಹ ಗುಡುಗು ಸಹಿತ ಒಂದು ಇಂಚಿಗೂ ಅಧಿಕ ಮಳೆ ಸುರಿದು ಕಾದ ಭುವಿಗೆ ತಂಪೆರೆದಿದೆ.

ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ನಾಪೋಕ್ಲು ಜನತೆಗೆ ಇಂದು ಸುರಿದ ಮಳೆ ತಂಪೆರೆದಿದ್ದು, ಜನರಲ್ಲಿ ಹರ್ಷ ಮೂಡಿಸಿದೆ.

ನಾಪೋಕ್ಲು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಬೇತು, ಹಳೇ ತಾಲೂಕು, ಚೆರಿಯಪರಂಬು, ಚೋನಾಕೆರೆ ಕೊಟ್ಟಮುಡಿ, ಕೊಳಕೇರಿ ಗ್ರಾಮ ವ್ಯಾಪ್ತಿಯಲ್ಲಿ ಇಂದು ಸಂಜೆ ವೇಳೆಗೆ ಒಂದು ಇಂಚಿಗೂ ಅಧಿಕ ಮಳೆ ಸುರಿದು ಕಾದ ಭುವಿಗೆ ತಂಪೆರಿದಿದೆ.

ನಾಪೋಕ್ಲು ವಿಭಾಗದ ವಿವಿಧ ಗ್ರಾಮಗಳಿಗೆ ಕಳೆದ ಕೆಲವು ದಿನಗಳಿಂದ ಆಲಿಕಲ್ಲು ಸಹಿತ ಉತ್ತಮ ಮಳೆಯಾಗಿದೆ. ನಾಪೋಕ್ಲು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಮಳೆ ಕಣ್ಮರೆಯಾಗಿ ಜನರಲ್ಲಿ ನಿರಾಸೆ ಮೂಡಿಸಿತ್ತು. ಆದರೆ ಇಂದು ಸುರಿದ ಮಳೆ ಜನರಲ್ಲಿ ಸಂತಸ ಮೂಡಿಸಿದೆ. ನಾಪೋಕ್ಲು ವ್ಯಾಪ್ತಿಯ ಹಲವು ಕಡೆ ಕಾಫಿ ಕೊಯ್ಲು ಕಾರ್ಯ ಪೂರ್ಣ ಗೊಂಡು ಬೆಳೆಗಾರರು ಹೂ ಮಳೆಗಾಗಿ ಕಾಯುತ್ತಿರುವಾಗಲೇ ಇಂದು ಉತ್ತಮ ಮಳೆಯ ಆಗಮನದಿಂದ ಬೆಳೆಗಾರ ಹರ್ಷಗೊಂಡಿದ್ದಾನೆ.

ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಕಕ್ಕಬ್ಬೆ ಕುಂಜಿಲ ಸೇರಿದಂತೆ ನಾಪೋಕ್ಲು ವ್ಯಾಪ್ತಿಯ ಹಲವು ಗ್ರಾಮಗಳಿಗೆ ಕಳೆದ ಕೆಲವು ದಿನಗಳ ಹಿಂದೆ ಉತ್ತಮ ಮಳೆಯಾಗಿತ್ತು. ಅದರಂತೆ ಎಮ್ಮೆಮಾಡು ವ್ಯಾಪ್ತಿಯಲ್ಲೂ ಕಳೆದ ಎರಡು ದಿನಗಳ ಹಿಂದೆ ಒಂದು ಇಂಚಿಗೂ ಅಧಿಕ ಮಳೆ ಸುರಿದಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿಎಂಗೆ ವಿದ್ಯಾರ್ಥಿಗಳು ಪತ್ರ ಬರೆದ ಪ್ರಕರಣ: ಪಚ್ಚೆದೊಡ್ಡಿ ಸರ್ಕಾರಿ ಶಾಲೆಗೆ ಬಿಇಒ ಭೇಟಿ

ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…

21 mins ago

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…

25 mins ago

ಕೈಬೀಸಿ ಕರೆಯುತ್ತಿದೆ ‘ಪ್ರಸಾರಾಂಗ ಪುಸ್ತಕೋತ್ಸವ’

ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…

31 mins ago

ನಗರಪಾಲಿಕೆ ಆರ್ಥಿಕ ಬರ ನೀಗಿಸಿದ ತೆರಿಗೆ ಸಂಗ್ರಹ

ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…

36 mins ago

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

11 hours ago