ಕೊಡಗು: ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲುಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಇಂದು ಸಹ ಗುಡುಗು ಸಹಿತ ಒಂದು ಇಂಚಿಗೂ ಅಧಿಕ ಮಳೆ ಸುರಿದು ಕಾದ ಭುವಿಗೆ ತಂಪೆರೆದಿದೆ.
ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ನಾಪೋಕ್ಲು ಜನತೆಗೆ ಇಂದು ಸುರಿದ ಮಳೆ ತಂಪೆರೆದಿದ್ದು, ಜನರಲ್ಲಿ ಹರ್ಷ ಮೂಡಿಸಿದೆ.
ನಾಪೋಕ್ಲು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಬೇತು, ಹಳೇ ತಾಲೂಕು, ಚೆರಿಯಪರಂಬು, ಚೋನಾಕೆರೆ ಕೊಟ್ಟಮುಡಿ, ಕೊಳಕೇರಿ ಗ್ರಾಮ ವ್ಯಾಪ್ತಿಯಲ್ಲಿ ಇಂದು ಸಂಜೆ ವೇಳೆಗೆ ಒಂದು ಇಂಚಿಗೂ ಅಧಿಕ ಮಳೆ ಸುರಿದು ಕಾದ ಭುವಿಗೆ ತಂಪೆರಿದಿದೆ.
ನಾಪೋಕ್ಲು ವಿಭಾಗದ ವಿವಿಧ ಗ್ರಾಮಗಳಿಗೆ ಕಳೆದ ಕೆಲವು ದಿನಗಳಿಂದ ಆಲಿಕಲ್ಲು ಸಹಿತ ಉತ್ತಮ ಮಳೆಯಾಗಿದೆ. ನಾಪೋಕ್ಲು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಮಳೆ ಕಣ್ಮರೆಯಾಗಿ ಜನರಲ್ಲಿ ನಿರಾಸೆ ಮೂಡಿಸಿತ್ತು. ಆದರೆ ಇಂದು ಸುರಿದ ಮಳೆ ಜನರಲ್ಲಿ ಸಂತಸ ಮೂಡಿಸಿದೆ. ನಾಪೋಕ್ಲು ವ್ಯಾಪ್ತಿಯ ಹಲವು ಕಡೆ ಕಾಫಿ ಕೊಯ್ಲು ಕಾರ್ಯ ಪೂರ್ಣ ಗೊಂಡು ಬೆಳೆಗಾರರು ಹೂ ಮಳೆಗಾಗಿ ಕಾಯುತ್ತಿರುವಾಗಲೇ ಇಂದು ಉತ್ತಮ ಮಳೆಯ ಆಗಮನದಿಂದ ಬೆಳೆಗಾರ ಹರ್ಷಗೊಂಡಿದ್ದಾನೆ.
ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಕಕ್ಕಬ್ಬೆ ಕುಂಜಿಲ ಸೇರಿದಂತೆ ನಾಪೋಕ್ಲು ವ್ಯಾಪ್ತಿಯ ಹಲವು ಗ್ರಾಮಗಳಿಗೆ ಕಳೆದ ಕೆಲವು ದಿನಗಳ ಹಿಂದೆ ಉತ್ತಮ ಮಳೆಯಾಗಿತ್ತು. ಅದರಂತೆ ಎಮ್ಮೆಮಾಡು ವ್ಯಾಪ್ತಿಯಲ್ಲೂ ಕಳೆದ ಎರಡು ದಿನಗಳ ಹಿಂದೆ ಒಂದು ಇಂಚಿಗೂ ಅಧಿಕ ಮಳೆ ಸುರಿದಿದೆ.
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…
ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…
ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್ ಯು.ಟಿ.ಖಾದರ್ ಅವರು…
ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್ಪಾತ್ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…