ಕೊಡಗು: ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲುಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಇಂದು ಸಹ ಗುಡುಗು ಸಹಿತ ಒಂದು ಇಂಚಿಗೂ ಅಧಿಕ ಮಳೆ ಸುರಿದು ಕಾದ ಭುವಿಗೆ ತಂಪೆರೆದಿದೆ.
ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ನಾಪೋಕ್ಲು ಜನತೆಗೆ ಇಂದು ಸುರಿದ ಮಳೆ ತಂಪೆರೆದಿದ್ದು, ಜನರಲ್ಲಿ ಹರ್ಷ ಮೂಡಿಸಿದೆ.
ನಾಪೋಕ್ಲು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಬೇತು, ಹಳೇ ತಾಲೂಕು, ಚೆರಿಯಪರಂಬು, ಚೋನಾಕೆರೆ ಕೊಟ್ಟಮುಡಿ, ಕೊಳಕೇರಿ ಗ್ರಾಮ ವ್ಯಾಪ್ತಿಯಲ್ಲಿ ಇಂದು ಸಂಜೆ ವೇಳೆಗೆ ಒಂದು ಇಂಚಿಗೂ ಅಧಿಕ ಮಳೆ ಸುರಿದು ಕಾದ ಭುವಿಗೆ ತಂಪೆರಿದಿದೆ.
ನಾಪೋಕ್ಲು ವಿಭಾಗದ ವಿವಿಧ ಗ್ರಾಮಗಳಿಗೆ ಕಳೆದ ಕೆಲವು ದಿನಗಳಿಂದ ಆಲಿಕಲ್ಲು ಸಹಿತ ಉತ್ತಮ ಮಳೆಯಾಗಿದೆ. ನಾಪೋಕ್ಲು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಮಳೆ ಕಣ್ಮರೆಯಾಗಿ ಜನರಲ್ಲಿ ನಿರಾಸೆ ಮೂಡಿಸಿತ್ತು. ಆದರೆ ಇಂದು ಸುರಿದ ಮಳೆ ಜನರಲ್ಲಿ ಸಂತಸ ಮೂಡಿಸಿದೆ. ನಾಪೋಕ್ಲು ವ್ಯಾಪ್ತಿಯ ಹಲವು ಕಡೆ ಕಾಫಿ ಕೊಯ್ಲು ಕಾರ್ಯ ಪೂರ್ಣ ಗೊಂಡು ಬೆಳೆಗಾರರು ಹೂ ಮಳೆಗಾಗಿ ಕಾಯುತ್ತಿರುವಾಗಲೇ ಇಂದು ಉತ್ತಮ ಮಳೆಯ ಆಗಮನದಿಂದ ಬೆಳೆಗಾರ ಹರ್ಷಗೊಂಡಿದ್ದಾನೆ.
ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಕಕ್ಕಬ್ಬೆ ಕುಂಜಿಲ ಸೇರಿದಂತೆ ನಾಪೋಕ್ಲು ವ್ಯಾಪ್ತಿಯ ಹಲವು ಗ್ರಾಮಗಳಿಗೆ ಕಳೆದ ಕೆಲವು ದಿನಗಳ ಹಿಂದೆ ಉತ್ತಮ ಮಳೆಯಾಗಿತ್ತು. ಅದರಂತೆ ಎಮ್ಮೆಮಾಡು ವ್ಯಾಪ್ತಿಯಲ್ಲೂ ಕಳೆದ ಎರಡು ದಿನಗಳ ಹಿಂದೆ ಒಂದು ಇಂಚಿಗೂ ಅಧಿಕ ಮಳೆ ಸುರಿದಿದೆ.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…