ಕೊಡಗು: ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲುಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಇಂದು ಸಹ ಗುಡುಗು ಸಹಿತ ಒಂದು ಇಂಚಿಗೂ ಅಧಿಕ ಮಳೆ ಸುರಿದು ಕಾದ ಭುವಿಗೆ ತಂಪೆರೆದಿದೆ.
ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ನಾಪೋಕ್ಲು ಜನತೆಗೆ ಇಂದು ಸುರಿದ ಮಳೆ ತಂಪೆರೆದಿದ್ದು, ಜನರಲ್ಲಿ ಹರ್ಷ ಮೂಡಿಸಿದೆ.
ನಾಪೋಕ್ಲು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಬೇತು, ಹಳೇ ತಾಲೂಕು, ಚೆರಿಯಪರಂಬು, ಚೋನಾಕೆರೆ ಕೊಟ್ಟಮುಡಿ, ಕೊಳಕೇರಿ ಗ್ರಾಮ ವ್ಯಾಪ್ತಿಯಲ್ಲಿ ಇಂದು ಸಂಜೆ ವೇಳೆಗೆ ಒಂದು ಇಂಚಿಗೂ ಅಧಿಕ ಮಳೆ ಸುರಿದು ಕಾದ ಭುವಿಗೆ ತಂಪೆರಿದಿದೆ.
ನಾಪೋಕ್ಲು ವಿಭಾಗದ ವಿವಿಧ ಗ್ರಾಮಗಳಿಗೆ ಕಳೆದ ಕೆಲವು ದಿನಗಳಿಂದ ಆಲಿಕಲ್ಲು ಸಹಿತ ಉತ್ತಮ ಮಳೆಯಾಗಿದೆ. ನಾಪೋಕ್ಲು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಮಳೆ ಕಣ್ಮರೆಯಾಗಿ ಜನರಲ್ಲಿ ನಿರಾಸೆ ಮೂಡಿಸಿತ್ತು. ಆದರೆ ಇಂದು ಸುರಿದ ಮಳೆ ಜನರಲ್ಲಿ ಸಂತಸ ಮೂಡಿಸಿದೆ. ನಾಪೋಕ್ಲು ವ್ಯಾಪ್ತಿಯ ಹಲವು ಕಡೆ ಕಾಫಿ ಕೊಯ್ಲು ಕಾರ್ಯ ಪೂರ್ಣ ಗೊಂಡು ಬೆಳೆಗಾರರು ಹೂ ಮಳೆಗಾಗಿ ಕಾಯುತ್ತಿರುವಾಗಲೇ ಇಂದು ಉತ್ತಮ ಮಳೆಯ ಆಗಮನದಿಂದ ಬೆಳೆಗಾರ ಹರ್ಷಗೊಂಡಿದ್ದಾನೆ.
ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಕಕ್ಕಬ್ಬೆ ಕುಂಜಿಲ ಸೇರಿದಂತೆ ನಾಪೋಕ್ಲು ವ್ಯಾಪ್ತಿಯ ಹಲವು ಗ್ರಾಮಗಳಿಗೆ ಕಳೆದ ಕೆಲವು ದಿನಗಳ ಹಿಂದೆ ಉತ್ತಮ ಮಳೆಯಾಗಿತ್ತು. ಅದರಂತೆ ಎಮ್ಮೆಮಾಡು ವ್ಯಾಪ್ತಿಯಲ್ಲೂ ಕಳೆದ ಎರಡು ದಿನಗಳ ಹಿಂದೆ ಒಂದು ಇಂಚಿಗೂ ಅಧಿಕ ಮಳೆ ಸುರಿದಿದೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…