rainy days
ಬೆಂಗಳೂರು: ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕೆಲವು ಕಡೆ ಇನ್ನೂ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಇಂದು ಧಾರಾಕಾರ ಮಳೆಯಾಗಲಿದ್ದು, ಈ ಮೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ತುಮಕೂರು, ಹಾಸನ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ ತುಂತುರು ಮಳೆಯಾಗಲಿದೆ.
ಇನ್ನು ಭಾರೀ ಮಳೆಯಾಗುತ್ತಿರುವ ಪರಿಣಾಮ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಡ್ಯಾಂಗಳಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು…
ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ…
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…
ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್ ಜಿ ಮಸೂದೆ ಅಂಗೀಕಾರಗೊಂಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್ಗಾರ್ ಮತ್ತು ಅಜೀವಿಕಾ…
ಬೆಳಗಾವಿ: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು…
ಬೆಂಗಳೂರು: ಪಾರಿವಾಳದ ಮಲ-ಮೂತ್ರದಿಂದ ಸೋಂಕು, ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು…