ಮಡಿಕೇರಿ: ಮಡಿಕೇರಿ-ಮಂಗಳೂರು ರಸ್ತೆಯ ಮದೆನಾಡು ಬಳಿಯ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿಯ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಜುಲೈ 22 ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರಕ್ಕೆ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ ವೆಂಕಟ ರಾಜಾ ಆದೇಶ ಹೊರಡಿಸಿದ್ದಾರೆ.
ರಾತ್ರಿ ವೇಳೆಯಲ್ಲಿ ಹೆಚ್ಚಿನ ಅವಘಡ ಸಂಭವಿಸುಬಹುದಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಜುಲೈ 18 ರ ರಾತ್ರಿ 8 ಗಂಟೆಯಿಂದ ಜುಲೈ 22ರ ಬೆಳಿಗ್ಗೆ 6 ಗಂಟೆ ವರೆಗೆ ಹೆದ್ದಾರಿಯಲ್ಲಿ ಮಡಿಕೇರಿಯಿಂದ ಸಂಪಾಜೆವರೆಗೆ ರಾತ್ರಿ ವೇಳೆ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ರಸ್ತೆ ಸಂಚಾರ ನಿಷೇಧಕ್ಕೆ ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಅಧಿಕಾರಿ ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನ ತೀವ್ರ ಮಳೆಯಾಗಲಿದೆ. ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿವ ಕರ್ತೋಜಿ ಪ್ರದೇಶದಲ್ಲಿ ತುರ್ತು ಸೇವೆ ಹಾಗೂ ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ಅಧಿಕಾರಿ ಸಂಚರಿಸುವ ವಾಹನ ಹೊರತುಪಡಿಸಿ, ಇನ್ನುಳಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
ಕಣ್ಣೂರು: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ…
ಬೆಂಗಳೂರು: ಈ ಬಾರಿಯ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ…
ಕಲಬುರ್ಗಿ: ಕಾಂಗ್ರೆಸ್ ಹೈಕಮಾಂಡ್ ಯಾರು ಅನ್ನೋದೆ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ…
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…
ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಹಾಗೂ…