ಮಡಿಕೇರಿ: ಮಡಿಕೇರಿ-ಮಂಗಳೂರು ರಸ್ತೆಯ ಮದೆನಾಡು ಬಳಿಯ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿಯ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಜುಲೈ 22 ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರಕ್ಕೆ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ ವೆಂಕಟ ರಾಜಾ ಆದೇಶ ಹೊರಡಿಸಿದ್ದಾರೆ.
ರಾತ್ರಿ ವೇಳೆಯಲ್ಲಿ ಹೆಚ್ಚಿನ ಅವಘಡ ಸಂಭವಿಸುಬಹುದಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಜುಲೈ 18 ರ ರಾತ್ರಿ 8 ಗಂಟೆಯಿಂದ ಜುಲೈ 22ರ ಬೆಳಿಗ್ಗೆ 6 ಗಂಟೆ ವರೆಗೆ ಹೆದ್ದಾರಿಯಲ್ಲಿ ಮಡಿಕೇರಿಯಿಂದ ಸಂಪಾಜೆವರೆಗೆ ರಾತ್ರಿ ವೇಳೆ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ರಸ್ತೆ ಸಂಚಾರ ನಿಷೇಧಕ್ಕೆ ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಅಧಿಕಾರಿ ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನ ತೀವ್ರ ಮಳೆಯಾಗಲಿದೆ. ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿವ ಕರ್ತೋಜಿ ಪ್ರದೇಶದಲ್ಲಿ ತುರ್ತು ಸೇವೆ ಹಾಗೂ ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ಅಧಿಕಾರಿ ಸಂಚರಿಸುವ ವಾಹನ ಹೊರತುಪಡಿಸಿ, ಇನ್ನುಳಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…