ಮಡಿಕೇರಿ: ಮಡಿಕೇರಿ-ಮಂಗಳೂರು ರಸ್ತೆಯ ಮದೆನಾಡು ಬಳಿಯ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿಯ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಜುಲೈ 22 ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರಕ್ಕೆ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ ವೆಂಕಟ ರಾಜಾ ಆದೇಶ ಹೊರಡಿಸಿದ್ದಾರೆ.
ರಾತ್ರಿ ವೇಳೆಯಲ್ಲಿ ಹೆಚ್ಚಿನ ಅವಘಡ ಸಂಭವಿಸುಬಹುದಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಜುಲೈ 18 ರ ರಾತ್ರಿ 8 ಗಂಟೆಯಿಂದ ಜುಲೈ 22ರ ಬೆಳಿಗ್ಗೆ 6 ಗಂಟೆ ವರೆಗೆ ಹೆದ್ದಾರಿಯಲ್ಲಿ ಮಡಿಕೇರಿಯಿಂದ ಸಂಪಾಜೆವರೆಗೆ ರಾತ್ರಿ ವೇಳೆ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ರಸ್ತೆ ಸಂಚಾರ ನಿಷೇಧಕ್ಕೆ ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಅಧಿಕಾರಿ ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನ ತೀವ್ರ ಮಳೆಯಾಗಲಿದೆ. ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿವ ಕರ್ತೋಜಿ ಪ್ರದೇಶದಲ್ಲಿ ತುರ್ತು ಸೇವೆ ಹಾಗೂ ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ಅಧಿಕಾರಿ ಸಂಚರಿಸುವ ವಾಹನ ಹೊರತುಪಡಿಸಿ, ಇನ್ನುಳಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…