ಕೊಡಗು

ಮುನಿರತ್ನರನ್ನ ಕರಿಟೋಪಿ ಎಂದು ಕರೆದಿದ್ದಕ್ಕೆ ಪ್ರಶಂಸೆ ವ್ಯಕ್ತಪಡಿಸುತ್ತೇನೆ : ಲಕ್ಷ್ಮಣ್‌

ಮಡಿಕೇರಿ : ಶಾಸಕ ಮುನಿರತ್ನ ಅವರನ್ನು ಕರಿಟೋಪಿ ಎಂಎಲ್‌ಎ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆದಿದ್ದರೆ ಅದಕ್ಕೆ ಪ್ರಶಂಸೆ ವ್ಯಕ್ತಪಡಿಸುತ್ತೇನೆ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಏನು ಸ್ವಾತಂತ್ರ್ಯ ತಂದುಕೊಟ್ಟ ಸಂಘವೇ? ಮಹಾತ್ಮ ಗಾಂಧಿಯನ್ನು ಕೊಂದಂತಹ ಸಂಘ. ಇಡೀ ದೇಶದಲ್ಲಿ ಕೋಮುಗಲಭೆ ಹರಡಿಸುತ್ತಿರುವ ಸಂಘ ಅದು. ಆ ಸಂಸ್ಥೆಯನ್ನು ಬ್ಯಾನ್ ಮಾಡುವ ಕೆಲಸ ಆಗಬೇಕಾಗಿತ್ತು. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನೂರಕ್ಕೆ ನೂರರಷ್ಟು ಆ ಸಂಘವನ್ನು ಬ್ಯಾನ್ ಮಾಡುತ್ತೇವೆ. ದೇಶದಲ್ಲಿ ಓಟ್ ಚೋರಿ ಮೂಲಕ ಚುನಾವಣೆ ಗೆಲ್ಲುವಂತಹ ಕೆಲಸ ಮಾಡುತ್ತಿರುವುದೇ ಆರ್‌ಎಸ್‌ಎಸ್. ಆರ್‌ಎಸ್‌ಎಸ್ ಅನ್ನು ಕರಿಟೋಪಿ, ಕಳ್ಳ ಅಂತ ಕರೆದರೂ ನಾನು ಒಪ್ಪಿಕೊಳ್ಳುತ್ತೇನೆ. ಅಂತಹವರನ್ನು ಕಳ್ಳರು ಅಂತ ಕರೆದರೂ ನಾನು ಒಪ್ಪಿಕೊಳ್ಳುತ್ತೇನೆ ಎಂದರು.

ಇದನ್ನು ಓದಿ: RSS ವಿಷಪೂರಿತ ಸಿದ್ಧಾಂತ ಹರಡಬಾರದು : ಯತೀಂದ್ರ ಸಿದ್ದರಾಮಯ್ಯ

ಇಡೀ ದೇಶವನ್ನು ಹಾಳು ಮಾಡುತ್ತಿರುವುದೇ ಆರ್‌ಎಸ್‌ಎಸ್. ಡಿಕೆಶಿ ಅವರು ಆ ರೀತಿ ಕರೆದಿದ್ದರೆ ಅದನ್ನು ವೈಯಕ್ತಿಕವಾಗಿ ಪ್ರಶಂಸಿಸುತ್ತೇನೆ. ಮುನಿರತ್ನ ವ್ಯಾಪಾರಕ್ಕೋಸ್ಕರ ಬಿಜೆಪಿಗೆ ಸೇರಿಕೊಂಡರು. ಅಲ್ಲಿಗೆ ಹೋಗಿ ಚಡ್ಡಿ ಹಾಕಿಕೊಂಡು ಕರಿಟೊಪಿ ಹಾಕಿಕೊಂಡು ಸುತ್ತುವ ಕೆಲಸ ಮಾಡುತ್ತಿದ್ದಾರೆ ಎಂದರು.

ಈ ಸಂಬಂಧ ಸಚಿವ ಹೆಚ್.ಸಿ. ಮಹದೇವಪ್ಪ ಪ್ರತಿಕ್ರಿಯಿಸಿ, ಡಿಕೆಶಿ ಮುನಿರತ್ನ ಅವರನ್ನು ಹಾಗೆ ಕರೆದಿರುವುದು ನನಗೆ ಗೊತ್ತಿಲ್ಲ. ಆದರೆ ಬಿಜೆಪಿಯಲ್ಲಿ ಅಭಿವೃದ್ಧಿ ಕೆಲಸದ ಬಗ್ಗೆ ಚರ್ಚೆ ಆಗಲ್ಲ. ಒಳ್ಳೆಯ ಆಡಳಿತದ ಬಗ್ಗೆ ಚರ್ಚೆಯಾಗಲ್ಲ. ಬದಲಾಗಿ ಇಂತಹ ವಿಚಾರಗಳ ಬಗ್ಗೆ ಚರ್ಚೆ ಆಗುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

16 mins ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

33 mins ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

59 mins ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

2 hours ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

3 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

6 hours ago