ಮಡಿಕೇರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಏರ್ಪಡಿಸಿರುವ ಔತಣಕೂಟಕ್ಕೆ ಎಲ್ಲ ಸಚಿವರನ್ನೂ ಕರೆದಿದ್ದಾರೆ. ನಾನು ಕೂಡ ಹೋಗುತ್ತೇನೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆ ಹೈಕಮಾಂಡ್ಗೆ ಬಿಟ್ಟ ವಿಚಾರ. ಹೈಕಮಾಂಡ್ ಸೂಚನೆ ಕೊಡುವವರೆಗೂ ಯಾರು ಏನು ಹೇಳಿದರೂ ಪ್ರಯೋಜನ ಇಲ್ಲ. ಯಾರಾದರೂ ಲಾಬಿ ನಡೆಸುತ್ತಿದ್ದಾರೆ ಎಂಬುದು ನನ್ನ ಗಮನದಲ್ಲಿ ಇಲ್ಲ. ನಾಳೆಯ ಔತಣಕೂಟಕ್ಕೆ ಎಲ್ಲ ಸಚಿವರನ್ನೂ ಆಹ್ವಾನಿಸಿದ್ದು, ನಾನು ಕೂಡ ಹೋಗುತ್ತೇನೆ. ಅದರಲ್ಲಿ ಯಾವುದೇ ವಿಶೇಷ ಇಲ್ಲ ಎಂದರು.
ಸಿಎಂ ಸ್ಥಾನ ಬದಲಾವಣೆ ಆಗುವುದು ಖಚಿತ ಎಂದು ಶ್ರೀರಾಮುಲು ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಶ್ರೀರಾಮುಲು ಬಿಜೆಪಿಯಲ್ಲಿ ಇರುವುದು. ಅವರಿಗೆ ಕಾಂಗ್ರೆಸ್ ಬಗ್ಗೆ ಆಸಕ್ತಿ ಏಕೆ ಎಂದು ಪ್ರಶ್ನಿಸಿದರಲ್ಲದೆ, ಇದು ಶ್ರೀರಾಮುಲು ಅವರಿಗೆ ಬೇಕಿಲ್ಲದ ವಿಚಾರ ಎಂದು ತಿರುಗೇಟು ನೀಡಿದರು.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…