ಮಡಿಕೇರಿ: ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಮೊಬೈಲ್ನ್ನು ಎಸ್ಐಟಿ ತನಿಖೆಗೆ ಕೊಟ್ಟರೆ ಪ್ರಜ್ವಲ್ ರೇವಣ್ಣನಂತೆ ಪ್ರತಾಪ್ ಸಿಂಹ ಕೂಡ ಜೈಲುಶಿಕ್ಷೆ ಅನುಭವಿಸುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಮಡಿಕೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 2023ರಲ್ಲಿ ಸಂಸತ್ ಭದ್ರತಾ ಉಲ್ಲಂಘನೆ ಬಳಿಕ ಪೊಲೀಸರು ಪ್ರತಾಪ್ ಸಿಂಹ ಮೊಬೈಲ್ ವಶಪಡಿಸಿಕೊಂಡಿದ್ದರು. ಈ ವೇಳೆ ಪ್ರತಾಪ್ ಸಿಂಹ ಮೊಬೈಲ್ನಲ್ಲಿ ನಗ್ನ ಚಿತ್ರಗಳು, ವಿಡಿಯೋಗಳು ಪತ್ತೆಯಾಗಿವೆ. ಇದನ್ನು ನೋಡಿದ ಅಮಿತ್ ಶಾ ಅವರೇ ದಿಗ್ಬ್ರಮೆಯಾಗಿದ್ದರು. ಈ ಬಗ್ಗೆ ನನ್ನ ಬಳಿ ಆಧಾರಗಳಿವೆ ಎಂದು ಹೊಸ ಬಾಂಬ್ ಸಿಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇದೇ ಕಾರಣಕ್ಕಾಗಿಯೇ ಪ್ರತಾಪ್ ಸಿಂಹ ಅವರಿಗೆ ಲೋಕಸಭಾ ಟಿಕೆಟ್ ನೀಡಲು ನಿರಾಕರಿಸಿದರು. ಪ್ರತಾಪ್ ಸಿಂಹ ಮೊಬೈಲ್ನ್ನು ಎಸ್ಐಟಿ ತನಿಖೆ ನಡೆಸಿದ್ರೆ, ಜೈಲುಶಿಕ್ಷೆ ಆಗುವುದು ಪಕ್ಕಾ ಎಂದು ವಾಗ್ದಾಳಿ ನಡೆಸಿದರು.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…